ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 ಅಕ್ಟೋಬರ್ 2021
ಭದ್ರಾವತಿಯ ಜಟ್’ಪಟ್ ನಗರದ ಮೈದಾನದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ಮೆಡಿಕಲ್ ಟೆಸ್ಟ್’ಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ. ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿ, ಬಂಧಿಸಲಾಗಿದೆ.
ಭದ್ರಾವತಿಯ ದುರ್ಗೀನಗರದ ತೌಸಿಫ್ (25), ಅನ್ವರ್ ಕಾಲೋನಿಯ ಸಾದತ್ (20), ಮೋಮಿನ್ ಮೊಹಲ್ಲಾದ ಸೈಯ್ಯದ್ ಬಿಲಾಲ್ (21) ಬಂಧಿತರು.
ಜಟ್ ಪಟ್ ನಗರದ ಮೈದಾನದಲ್ಲಿ ಈ ಮೂವರು ಗಾಂಜಾ ಸೇವಿಸಿ, ಅಲ್ಲಿ ಓಡಾಡುತ್ತಿದ್ದ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಇದನ್ನು ಗಮನಿಸಿದ್ದು, ಇವರನ್ನು ವಿಚಾರಿಸಿದ್ದಾರೆ. ಅನುಮಾನಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಲಾಯಿತು.
ಗಾಂಜಾ ಟೆಸ್ಟಿಂಗ್ ಕಿಟ್ ಮೂಲಕ ಪರೀಕ್ಷೆ ನಡೆಸಿದಾಗ ಮೂವರು ಗಾಂಜಾ ಸೇವನೆ ಮಾಡಿರುವುದು ಗೊತ್ತಾಗಿದೆ. ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200