ಶಿವಮೊಗ್ಗ ಲೈವ್.ಕಾಂ | HOSANAGARA NEWS | 24 ಸೆಪ್ಟಂಬರ್ 2020
ತಾಲೂಕು ಗರ್ತಿಕೆರೆ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಕಾರಿನಿಂದ ಕೆಳಗಿಳಿದವರು ಸಾವನ್ನಪ್ಪಿದ್ದಾರೆ. ಆತಂಕದಿಂದ ಕಾರಿನಲ್ಲೇ ಕುಳಿತ ಮೂವರ ರಕ್ಷಣೆ ಮಾಡಲಾಗಿದೆ.
ಹೇಗಾಯ್ತು ಅಪಘಾತ?
ಹೊಸನಗರ ಕಡೆಯಿಂದ ರಾತ್ರಿ ರಿಪ್ಪನ್ಪೇಟೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಶೀಲಿಸಲು ಕಾರಿನಿಂದ ಕೆಳಗಿಳಿದ ಚಾಲಕ ಲೋಹಿತ್ (34) ದಿಢೀರ್ ಕುಸಿದು ಬಿದ್ದಿದ್ದಾರೆ. ಲೋಹಿತ್ ತಾಯಿ ಕಲಾವತಿ (60) ಮತ್ತು ಅವರ ಮೊಮ್ಮಗ ಶಶಾಂಕ್ (8) ಕೂಡ ಕಾರಿನಿಂದ ಕೆಳಗಿಳಿದಿದ್ದಾರೆ. ಇಬ್ಬರು ಕುಸಿದು ಬಿದ್ದಿದ್ದಾರೆ.
ಕಾರಿನಲ್ಲಿದ್ದ ಮೂವರ ರಕ್ಷಣೆ
ಕಾರಿನಲ್ಲಿದ್ದ ಮೂವರು ಕುಸಿದು ಬಿದ್ದಿದ್ದರಿಂದ ಆತಂಕಕ್ಕೀಡಾದ ಇನ್ನೂ ಮೂವರು ಕಾರಿನಿಂದ ಕೆಳಗಿಳಿಯಲಿಲ್ಲ. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು, ಪೊಲೀಸರು ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಮೂವರನ್ನು ರಕ್ಷಿಸಿದ್ದಾರೆ. ಕಾರಿನಲ್ಲಿದ್ದ ಕಲಾವತಿ ಅವರ ಮಗಳು ಅಂಬಿಕಾ (35), ಅಂಬಿಕಾ ಅವರ ಪತಿ ರವಿಭಟ್ (45), ಇವರ ಮಗ ಗಣೇಶ್ನನ್ನು ರಕ್ಷಣೆ ಮಾಡಲಾಗಿದೆ.
ಕರೆಂಟ್ ಶಾಕ್ ಶಂಕೆ
ಕಾರು ಗುದ್ದಿದ ಕಂಬದಲ್ಲಿ ವಿದ್ಯುತ್ ಪ್ರವಹಿಸಿರುವ ಶಂಕೆಯಿದೆ. ಹಾಗಾಗಿ ಕಾರಿನಿಂದ ಕೆಳಗಿಳಿದ ಮೂವರು ವಿದ್ಯುತ್ ಶಾಕ್ನಿಂದ ಕೊನೆಯುಸಿರೆಳೆದಿರುವ ಅನುಮಾನವಿದೆ. ಇವರ ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200