SHIMOGA, 13 AUGUST 2024 : ವಿಷ ಸೇವಿಸಿ ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಓ.ಟಿ.ರಸ್ತೆಯ ವಿಜಯಾ ಗ್ಯಾರೇಜ್ ಸಮೀಪ ಮನೆಯಲ್ಲಿ ಘಟನೆ ಸಂಭವಿಸಿದೆ.
ಭುವನೇಶ್ವರಿ, ಅವರ ಸಹೋದರ ಮಾರುತಿ ಮತ್ತು ಮಗ ದರ್ಶನ್ ಮೃತರು. ಇವರು ಸೋಮವಾರವೆ ವಿಷ ಸೇವಿಸಿದ್ದಾರೆ ಎಂದ ಶಂಕಿಸಲಾಗಿದೆ. ಸಂಬಂಧಿಕರು ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಹಾಗಾಗಿ ಇವತ್ತು ಮನೆ ಬಳಿ ಬಂದಾಗ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ಇದನ್ನೂ ಓದಿ ⇒ ಪುರದಾಳು ರಸ್ತೆಯಲ್ಲಿ ಅಪಘಾತ, ಮಹಿಳೆಯ ಎರಡು ಕಾಲಿನ ಮೂಳೆ ಕಟ್ – ಇಲ್ಲಿದೆ 3 ಫಟಾಫಟ್ ನ್ಯೂಸ್
ವಿಷಯ ತಿಳಿದು ದೊಡ್ಡಪೇಟೆ ಠಾಣೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಇನ್ನು ಮೂವರ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಜನ ಸೇರಿದ್ದಾರೆ. ಇನ್ನಷ್ಟೆ ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
ಇದನ್ನೂ ಓದಿ ⇒ ಸಾಲ ವಸೂಲಿಗೆ ಮಹಿಳೆಯರ ಮನೆಗೆ ಹೋಗಿ ಕೂರುವ ಸಿಬ್ಬಂದಿ, ಖಡಕ್ ಸೂಚನೆ ನೀಡುವಂತೆ ಏಕಾಂಗಿ ಹೋರಾಟ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200