ಶಿವಮೊಗ್ಗದಲ್ಲಿ ಎಸಿಬಿ ದಾಳಿ, ಈವರೆಗೂ ಆಗಿರುವ ಐದು ಬೆಳವಣಿಗೆಗಳೇನು? ಇವತ್ತು ಏನೆಲ್ಲ ನಡೆಯುವ ಸಾಧ್ಯತೆ ಇದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ನವೆಂಬರ್ 2021

ರಾಶಿ ರಾಶಿ ಚಿನ್ನ, ಕಂತೆ ಕಂತೆ ಹಣ, ದಾಖಲೆಗಳು ಪತ್ತೆಯಾದ ಬೆನ್ನಿಗೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮತ್ತಷ್ಟು ಶೋಧ ಕಾರ್ಯ ನಡೆಸಲು ಮುಂದಾಗಿದ್ದಾರೆ. ಇವತ್ತೂ ಶೋಧ ಕಾರ್ಯ, ವಿಚಾರಣೆ ಮುಂದುವರೆಯಲಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ

ಬೆಳವಣಿಗೆ 1

ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳ ತಂಡ ಶಿವಮೊಗ್ಗದ ಚಾಲುಕ್ಯ ನಗರ ಮತ್ತು ಗೋಪಾಳದ ಎರಡು ಮನೆಗಳ ಮೇಲೆ ದಾಳಿ ನಡೆಸಿತು. ಎಸಿಬಿ ಪೂರ್ವ ವಲಯದ ಎಸ್.ಪಿ ಜಯಪ್ರಕಾಶ್ ಅವರ ನೇತೃತ್ವದಲ್ಲಿ 44 ಅಧಿಕಾರಿಗಳ ಐದು ತಂಡ ದಾಳಿಯಲ್ಲಿ ಪಾಲ್ಗೊಂಡಿತ್ತು.

ಬೆಳವಣಿಗೆ 2

ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಮನೆಗಳು, ತೋಟದ ಮೇಲೆ ಎಸಿಬಿಯ ಐದು ತಂಡಗಳು ದಾಳಿ ಮಾಡಿದ್ದವು. ಎರಡು ಮನೆಗಳಲ್ಲಿ ರಾತ್ರಿವರೆಗೂ ಶೋಧ ಕಾರ್ಯ ನಡೆಸಲಾಯಿತು.

ಬೆಳವಣಿಗೆ 3

ರುದ್ರೇಶಪ್ಪ ಮನೆಯಲ್ಲಿ ಎರಡು ಮನೆಗಳ ದಾಖಲೆ, ನಾಲ್ಕು ನಿವೇಶನದ ದಾಖಲೆ, 9 ಕೆ.ಜಿ 400 ಗ್ರಾಂ ಚಿನ್ನದ ಬಿಸ್ಕೇಟ್, ಆಭರಣ, ಮೂರು ಕೆ.ಜಿ. ತೂಕದ ಬೆಳ್ಳಿ ವಸ್ತುಗಳು, ಎರಡು ಕಾರು, ಮೂರು ದ್ವಿಚಕ್ರ ವಾಹನ, ಎಂಟು ಎಕರೆ ಕೃಷಿ ಭೂಮಿ ದಾಖಲೆ, 15.94 ಲಕ್ಷ ರೂ. ನಗದು, 20 ಲಕ್ಷ ರೂ. ಬೆಲೆ ಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.

ಬೆಳವಣಿಗೆ 4

ಕೆಜಿಗಟ್ಟಲೆ ಚಿನ್ನ, ಕಂತೆ ಕಂತೆ ಹಣ ಪತ್ತೆಯಾದ ಹಿನ್ನೆಲೆ ಗದಗ ಜಂಟಿ ನಿರ್ದೇಶಕ ರುದ್ರೇಶಪ್ಪ ಅವರಿಗೆ ಎಸಿಬಿ ಅಧಿಕಾರಿಗಳು ಬುಲಾವ್ ನೀಡಿದರು. ಹೆಚ್ಚಿನ ವಿಚಾರಣೆ ಮತ್ತು ಈಗಾಗಲೆ ವಶಕ್ಕೆ ಪಡೆದಿರುವ ಚಿನ್ನಾಭರಣ, ಹಣದ ಕುರಿತು ಮಾಹಿತಿ ಸಂಗ್ರಹಕ್ಕಾಗಿ ರುದ್ರೇಶಪ್ಪಗೆ ಬುಲಾವ್ ನೀಡಲಾಯಿತು.

ಬೆಳವಣಿಗೆ 5

ರಾತ್ರಿ ಶಿವಮೊಗ್ಗಕ್ಕೆ ಆಗಮಿಸಿದ ರುದ್ರೇಶಪ್ಪ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

241121 Gold and money found in Shimoga during ACB Raid

ಇವತ್ತು ಏನೆಲ್ಲ ಆಗಲಿದೆ?

ಇವತ್ತಿನ ಬೆಳವಣಿಗೆ 1

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಿವಮೊಗ್ಗದ ಶಾಖೆಯೊಂದರಲ್ಲಿ ರುದ್ರೇಶಪ್ಪಗೆ ಸೇರಿದ ಖಾತೆ ಮತ್ತು ಲಾಕರ್ ಇರುವುದಾಗಿ ತಿಳಿದು ಬಂದಿದೆ. ಇವುಗಳನ್ನು ರುದ್ರೇಶಪ್ಪ ಸಮುಖದಲ್ಲೇ ತೆರೆದು ಪರಿಶೀಲನೆ ನಡೆಸಲು ಎಸಿಬಿ ನಿರ್ಧರಿಸಿದೆ. ಲಾಕರ್’ನಲ್ಲಿ ಪ್ರಮುಖ ದಾಖಲೆಗಳು ಲಭ್ಯವಾಗುವ ಸಾಧ್ಯತೆ ಇದೆ.

ಇವತ್ತಿನ ಬೆಳವಣಿಗೆ 2

ನಿನ್ನೆ ಪತ್ತೆಯಾಗಿರುವ ಚಿನ್ನಾಭರಣ, ನಗದು, ಆಸ್ತಿಪಾಸ್ತಿ ದಾಖಲೆಗಳ ಕುರಿತು ಮಾಹಿತಿ ಸಂಗ್ರಹ ಮಾಡುವ ಸಾಧ್ಯತೆ ಇದೆ.

ಇವತ್ತಿನ ಬೆಳವಣಿಗೆ 3

ವಿಚಾರಣೆ ಬಳಿಕ ರುದ್ರೇಶಪ್ಪ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 25, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment