ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2020
ನಕ್ಷತ್ರ ಆಮೆ ಮಾರಾಟಕ್ಕೆ ಪ್ರಯತ್ನಿಸಿದ ನಾಲ್ಕು ಮಂದಿಯನ್ನು ಶಿವಮೊಗ್ಗದ ಅರಣ್ಯ ಇಲಾಖೆ ಸಿಬ್ಬಂದಿ ಅರೆಸ್ಟ್ ಮಾಡಿದ್ದಾರೆ. ಇವರು ಆಮೆ ಮಾರಾಟಕ್ಕೆ ಆಂಧ್ರ ಪ್ರದೇಶದಿಂದ ಶಿವಮೊಗ್ಗಕ್ಕೆ ಬಂದಿದ್ದರು.
50 ಲಕ್ಷಕ್ಕೆ ಡೀಲ್
ನಕ್ಷತ್ರ ಆಮೆ ಮಾರಾಟಕ್ಕೆ ಡೀಲ್ ರೆಡಿಯಾಗಿದ್ದು. ಸುಮಾರು 50 ಲಕ್ಷ ರುಪಾಯಿಗೆ ಆಮೆಯ ಮಾರಾಟಕ್ಕೆ ಯೋಜಿಸಲಾಗಿತ್ತು. ಆದರೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆಯ ವನ್ಯಜೀವಿ ವಿಭಾದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಪುರದಾಳು – ಗಾಡಿಕೊಪ್ಪ ರಸ್ತೆಯಲ್ಲಿ ಇವರನ್ನು ಬಂಧಿಸಲಾಗಿದೆ.

ಅಂಧ್ರದಿಂದ ಬಂದಿದ್ದರು
ಆಂದ್ರಪ್ರದೇಶದ ಅನಂತಪುರಂ ಮೂಲದ ಯರ್ರಿ ಸ್ವಾಮಿ, ಶಬ್ಬೀರ ಬಾಷಾ, ರಾಯಚೂರಿನ ಮುರಳೀದರ್, ಚಿತ್ರದುರ್ಗದ ಪದ್ಮಾವತಿ ಎಂಬುವವರನ್ನು ಬಂಧಿಸಲಾಗಿದೆ. ಅನಂತಪುರಂನಿಂದಲೇ ಆಮೆಯನ್ನು ತರಲಾಗಿತ್ತು. ಆದರೆ ಶಿವಮೊಗ್ಗದಲ್ಲಿ ಅದನ್ನು ಖರೀದಿಸಿಲು ಮುಂದಾದವರು ಯಾರು ಅನ್ನುವುದು ಇನ್ನೂ ತಿಳಿದು ಬಂದಿಲ್ಲ.
ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಪ್ರದೀಪ್ ಹಾಲಭಾವಿ, ಸಾಗರ ಅರಣ್ಯ ಸಂಚಾರಿ ದಳದ ಎಸ್ಐ ಮಲ್ಲಿಕಾರ್ಜುನ ಬಿ, DRFO ಅಂತೋಣಿ ರೇಗೊ, ಕೃಪಸಾಗರ್.ಸಿ, ಅರಣ್ಯ ರಕ್ಷಕರಾದ ಸಲೀಮ್, ರಮೇಶ್, ರಂಜಿತಾ, ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಗಳಾದ ರಂಗನಾಥ್, ಗಣೇಶ್.ಬಿ, ರತ್ನಾಕರ್ ವಿಶ್ವನಾಥ್.ಕೆ, ಪುಷ್ಪಾ, ಫಿಲೋಮಿನಾ ಸಿಕ್ವೇರಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















