ಆಂಧ್ರದಿಂದ ಹಿಡಿದು ತಂದರು, ಶಿವಮೊಗ್ಗದಲ್ಲಿ ಲಕ್ಷ ಲಕ್ಷಕ್ಕೆ ಮಾರಲು ಯತ್ನಿಸಿದರು, ಪುರದಾಳು ಬಳಿ ಅರಣ್ಯಾಧಿಕಾರಿಗಳಿಗೆ ಸಿಕ್ಕಿಬಿದ್ದರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

120830080 973000173179893 4449507748960184350 o.jpg? nc cat=109& nc sid=8024bb& nc ohc= qkJw9Hn9FMAX 9mH2k& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2020

ನಕ್ಷತ್ರ ಆಮೆ ಮಾರಾಟಕ್ಕೆ ಪ್ರಯತ್ನಿಸಿದ ನಾಲ್ಕು ಮಂದಿಯನ್ನು ಶಿವಮೊಗ್ಗದ ಅರಣ್ಯ ಇಲಾಖೆ ಸಿಬ್ಬಂದಿ ಅರೆಸ್ಟ್ ಮಾಡಿದ್ದಾರೆ. ಇವರು ಆಮೆ ಮಾರಾಟಕ್ಕೆ ಆಂಧ್ರ ಪ್ರದೇಶದಿಂದ ಶಿವಮೊಗ್ಗಕ್ಕೆ ಬಂದಿದ್ದರು.

50 ಲಕ್ಷಕ್ಕೆ ಡೀಲ್

ನಕ್ಷತ್ರ ಆಮೆ ಮಾರಾಟಕ್ಕೆ ಡೀಲ್ ರೆಡಿಯಾಗಿದ್ದು. ಸುಮಾರು 50 ಲಕ್ಷ ರುಪಾಯಿಗೆ ಆಮೆಯ ಮಾರಾಟಕ್ಕೆ ಯೋಜಿಸಲಾಗಿತ್ತು. ಆದರೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆಯ ವನ್ಯಜೀವಿ ವಿಭಾದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಪುರದಾಳು – ಗಾಡಿಕೊಪ್ಪ ರಸ್ತೆಯಲ್ಲಿ ಇವರನ್ನು ಬಂಧಿಸಲಾಗಿದೆ.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಅಂಧ್ರದಿಂದ ಬಂದಿದ್ದರು

ಆಂದ್ರಪ್ರದೇಶದ ಅನಂತಪುರಂ ಮೂಲದ ಯರ್ರಿ ಸ್ವಾಮಿ, ಶಬ್ಬೀರ ಬಾಷಾ, ರಾಯಚೂರಿನ ಮುರಳೀದರ್, ಚಿತ್ರದುರ್ಗದ ಪದ್ಮಾವತಿ ಎಂಬುವವರನ್ನು ಬಂಧಿಸಲಾಗಿದೆ. ಅನಂತಪುರಂನಿಂದಲೇ ಆಮೆಯನ್ನು ತರಲಾಗಿತ್ತು. ಆದರೆ ಶಿವಮೊಗ್ಗದಲ್ಲಿ ಅದನ್ನು ಖರೀದಿಸಿಲು ಮುಂದಾದವರು ಯಾರು ಅನ್ನುವುದು ಇನ್ನೂ ತಿಳಿದು ಬಂದಿಲ್ಲ.

ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಪ್ರದೀಪ್ ಹಾಲಭಾವಿ, ಸಾಗರ ಅರಣ್ಯ ಸಂಚಾರಿ ದಳದ ಎಸ್ಐ ಮಲ್ಲಿಕಾರ್ಜುನ ಬಿ, DRFO ಅಂತೋಣಿ ರೇಗೊ, ಕೃಪಸಾಗರ್.ಸಿ, ಅರಣ್ಯ ರಕ್ಷಕರಾದ ಸಲೀಮ್, ರಮೇಶ್, ರಂಜಿತಾ, ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಗಳಾದ ರಂಗನಾಥ್, ಗಣೇಶ್.ಬಿ, ರತ್ನಾಕರ್ ವಿಶ್ವನಾಥ್.ಕೆ, ಪುಷ್ಪಾ, ಫಿಲೋಮಿನಾ ಸಿಕ್ವೇರಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment