SHIVAMOGGA LIVE | 8 JULY 2023
SHIMOGA : ಯಶವಂತಪುರ – ಶಿವಮೊಗ್ಗ ರೈಲಿಗೆ (Train) ಸಿಲುಕಿ ಯುವಕನೊಬ್ಬನ ಕಾಲು ತುಂಡಾಗಿದೆ. ಶಿವಮೊಗ್ಗದ ಮಹಾದೇವಿ ಟಾಕೀಸ್ ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ ಘಟನೆ ಸಂಭವಿಸಿದೆ.
ನಾಗರಾಜ್ ಎಂಬಾತನ ಬಲಗಾಲು ತುಂಡಾಗಿದೆ. ಯಶವಂತಪುರ – ಶಿವಮೊಗ್ಗ ರೈಲಿನಲ್ಲಿ ನಾಗರಾಜ್ ಶಿವಮೊಗ್ಗಕ್ಕೆ ಆಗಮಿಸಿದ್ದ. ಅದೇ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡಿದ್ದಾನೆ. ರೈಲು (Train) ಇಳಿಯುವಾಗ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಜನರು ನಾಗರಾಜನನ್ನು ರಕ್ಷಿಸಿ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿ – ಅರ್ಧಕ್ಕರ್ಧ ಶಿವಮೊಗ್ಗ ತಾಲೂಕಿನಲ್ಲಿ ಜು.9ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ನಾಗರಾಜ್ ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನವನು ಎಂದು ತಿಳಿದು ಬಂದಿದೆ. ಕಡುರಿನಲ್ಲಿರುವ ಪೊಲೀಸ್ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200