ಶಿವಮೊಗ್ಗ – ಸಾಗರ ಹೆದ್ದಾರಿ, ನೀರಗಂಟಿಗೆ ಡಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ನುಗ್ಗಿದ ಲಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 MARCH 2023

SHIMOGA : ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಲಾರಿ (Truck) ಬಳಿಕ ಬಸ್ ನಿಲ್ದಾಣಕ್ಕೆ ನುಗ್ಗಿದೆ. ಘಟನೆಯಲ್ಲಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ನಿಲ್ದಾಣ ಧ್ವಂಸವಾಗಿದೆ.

Truck-collides-with-bus-stand-at-tuppur-in-Shimoga-Sagara-Road

ಶಿವಮೊಗ್ಗ – ಸಾಗರ ರಾಷ್ಟ್ರೀಯ ಹೆದ್ದಾರಿಯ ತುಪ್ಪೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ. ನೀರಗಂಟಿ ನಾಗರಾಜ್ (56) ಗಂಭೀರ ಗಾಯಗೊಂಡಿದ್ದಾರೆ.

ಹೇಗಾಯ್ತು ಘಟನೆ?

ಸಾಗರ ಕಡೆಯಿಂದ ವೇಗವಾಗಿ ಬಂದ ಲಾರಿ (Truck) ತುಪ್ಪೂರು ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿ ನಿಂತಿದ್ದ ನಾಗರಾಜ್ ಅವರಿಗೆ ಮೊದಲು ಡಿಕ್ಕಿ ಹೊಡೆದಿದೆ. ಅವರನ್ನು ಎಳೆದುಕೊಂಡು ಹೋಗಿ ತುಪ್ಪೂರು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಗರಾಜ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು, ಬಸ್ ನಿಲ್ದಾಣ ಸಂಪೂರ್ಣ ಹಾನಿಯಾಗಿದೆ. ಘಟನೆ ವೇಳೆ ಬಸ್ ನಿಲ್ದಾಣದಲ್ಲಿ ಮೂವರು ಕುಳಿತಿದ್ದರು. ಅದೃಷ್ಟವಶಾತ್ ಅವರು ಬಚಾವಾಗಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತದಾನ ಬಹಿಷ್ಕಾರದ ಎಚ್ಚರಿಕೆ, ಸರ್ಕಾರಕ್ಕೆ ಗುಡುವು ನೀಡಿದ ನಿವಾಸಿಗಳು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment