| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS, 9 DECEMBER 2024
ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಅಪಘಾತಗಳು (Truck) ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್.
ಲಾರಿ, ಕಾರು ಮುಖಾಮುಖಿ ಡಿಕ್ಕಿ
ಆಯನೂರು : ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಆಯನೂರು ಸಮೀಪದ ದೊಡ್ದಾನಂದಿ ಗ್ರಾಮದ ಸಮೀಪ ಭಾನುವಾರ ಘಟನೆ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು, ಆಯನೂರು ಕಡೆಯಿಂದ ತೆರಳುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿ ಅಪಘಾತಕ್ಕೀಡಾಗಿವೆ. ಕಾರಿನಲ್ಲಿದ್ದ ತಂದೆ ಮತ್ತು ಮಗನಿಗೆ ಗಾಯವಾಗಿದೆ. ಕೂಡಲೆ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಯಿತು. ಲಾರಿ ಪಲ್ಟಿಯಾಗಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೊಬ್ಬರ ತುಂಬಿದ್ದ ಲಾರಿ ಪಲ್ಟಿ
![]()
ಹೊಸನಗರ : ಚಾಲಕನ ನಿಯಂತ್ರಣ ತಪ್ಪಿದ ಗೊಬ್ಬರದ ಲಾರಿ ಹೊಸನಗರ ಪಟ್ಟಣದಲ್ಲಿ ಪಲ್ಟಿಯಾಗಿದೆ. ಬೆಳಗಿನ ಜವಾ ಘಟನೆ ಸಂಭವಿಸಿದ್ದು, ಚಾಲಕನಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ವಿದ್ಯುತ್ ತಂತಿ ತುಂಡಾಗಿದೆ. ಗೊಬ್ಬರ ತುಂಬಿದ್ದ ಲಾರಿ ಮಂಗಳೂರಿನಿಂದ ಸೊರಬಕ್ಕೆ ಲಾರಿ ತೆರಳುತ್ತಿತ್ತು. ಸ್ಥಳೀಯರು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮನೆಗೆ ನುಗ್ಗಿದ ಕಾರು

ಭದ್ರಾವತಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮನೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಪ್ರಾಣ ಹಾನಿ ತಪ್ಪಿದೆ ಎಂದು ತಿಳಿದು ಬಂದಿದೆ. ಜೇಡಿಕಟ್ಟೆ ಬಳಿ ಭಾನುವಾರ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್ನಲ್ಲಿ ನವಜಾತ ಶಿಶು ರವಾನೆ, ಕಾರಣವೇನು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()