80 ಅಡಿ ಆಳಕ್ಕೆ ಬೀಳಲು ಕಾರಣ ಬಿಚ್ಚಿಟ್ಟ ಗಾಯಾಳು, ಹೇಗಾಯ್ತು ಘಟನೆ? ಆತ ಬಿದ್ದಿದ್ದು ಪೊಲೀಸರಿಗೆ ಗೊತ್ತಾಗಿದ್ದು ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021

ಸಾಗರ ರಸ್ತೆಯಲ್ಲಿ ತುಂಗಾ ಚಾನಲ್‍ಗೆ ಬಿದ್ದ ವ್ಯಕ್ತಿಗೆ ಚಿಕಿತ್ಸೆ ಮುಂದುವರೆದಿದ್ದು, ಚೇತರಿಕೆ ಕಾಣುತ್ತಿದ್ದಾರೆ. ಪೊಲೀಸರ ವಿಚಾರಣೆ ವೇಳೆ  80 ಅಡಿ ಆಳಕ್ಕೆ ಬೀಳಲು ಕಾರಣವೇನು ಎಂದು ತಿಳಿಸಿದ್ದಾರೆ.

ಸಾಗರ ತಾಲೂಕು ನೀಚಡಿ ನಿವಸಿ ಸಂತೋಷ್ (45) ಸೋಮವಾರ ರಾತ್ರಿ, ಸಾಗರ ರಸ್ತೆಯ ತುಂಗಾ ಚಾನಲ್‍ನಗೆ ಬಿದ್ದಿದ್ದರು. ನಡುರಾತ್ರಿ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಸಂತೋಷ್ ಅವರ ರಕ್ಷಣೆ ಮಾಡಿತ್ತು.

ಇದನ್ನೂ ಓದಿ | ಗಾಡಿಕೊಪ್ಪ ಬಳಿ ತುಂಗಾ ಚಾನಲ್ಗೆ ಬಿದ್ದ ಸಾಗರದ ವ್ಯಕ್ತಿ, ನಡು ರಾತ್ರಿ 80 ಅಡಿಯಿಂದ ರಕ್ಷಣೆ

ಈ ಸಂಬಂಧ ತುಂಗಾ ನಗರ ಠಾಣೆ ಪೊಲೀಸರು ಸಂತೋಷ್‍ ಅವರಿಂದ ಹೇಳಿಕೆ ಪಡೆದಿದ್ದು, ಘಟನೆ ಸಂಬಂಧ ಪೂರ್ಣ ಮಾಹಿತಿ ಲಭ್ಯವಾಗಿದೆ.

ಸಂತೋಷ್ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಆಗಮಿಸಿದ್ದರು. ರಾತ್ರಿ ಸಾಗರಕ್ಕೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಮೂತ್ರ ವಿಸರ್ಜನೆಗಾಗಿ ತುಂಗಾ ಚಾನಲ್ ಬಳಿಗೆ ತೆರಳಿದ್ದಾರೆ. ಈ ವೇಳೆ ಕಾಲು ಜಾರಿ 80 ಅಡಿ ಆಳಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಸಂತೋಷ್ ಅವರ ಕಾಲು, ತಲೆಗೆ ಗಂಭೀರ ಪೆಟ್ಟು ಬಿದ್ದಿದೆ. ದೇಹದ ವಿವಿಧೆಡೆ ಗಾಯವಾಗಿದೆ.

ಚಾನಲ್‍ಗೆ ಬೀಳುತ್ತಿದ್ದಂತೆ ಸಂತೋಷ್ ಅವರೆ ತಮ್ಮ ಮೊಬೈಲ್‍ನಿಂದ ಪೊಲೀಸ್ ಕಂಟ್ರೋಲ್‍ ರೂಂಗೆ ಕರೆ ಮಾಡಿ, ಘಟನೆಯನ್ನು ವಿವರಿಸಿದ್ದಾರೆ. ಕೂಡಲೆ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ, ಸಂತೋಷ್ ಅವರ ರಕ್ಷಣೆ ಮಾಡಿದ್ದಾರೆ.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ.ಆರ್.ಅಶೋಕ್ ಕುಮಾರ್, ಸಿಬ್ಬಂದಿಗಳಾದ ನಾಗರಾಜಪ್ಪ, ವಿನಯ್, ಯೋಗೇಶ್, ಸತೀಶ್, ರಮೇಶ್, ಶಾಂತರಾಜು ಮತ್ತು ತುಂಗಾ ನಗರ ಠಾಣೆ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 17, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment