ಕೆರೆಯಲ್ಲಿ ಮುಳುಗಿ ಯುವಕ ಸಾವು ಪ್ರಕರಣಕ್ಕೆ ಟ್ವಿಸ್ಟ್, ‘ಆಕಸ್ಮಿಕ ಸಾವಲ್ಲ ಕೊಲೆ’ ಅಂತಾ ದೂರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA / SHIKARIPURA NEWS | 7 ಡಿಸೆಂಬರ್ 2021

ಕೆರೆಯಲ್ಲಿ ಬಿದ್ದು ಇತ್ತೀಚೆಗೆ ಮೃತಪಟ್ಟಿದ್ದ ಯುವಕನ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅದು ಆಕಸ್ಮಿಕ ಸಾವಲ್ಲ ಕೊಲೆ ಎಂದು ಮೃತನ ಪಾಲಕರು ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್‌ ಅವರಿಗೆ ದೂರು ನೀಡಿದ್ದಾರೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಶಿಕಾರಿಪುರ ತಾಲೂಕಿನ ಕೋಡಿಹಳ್ಳಿಯ ಸತೀಶ್ (29) ನ.30ರಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದ. ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸತೀಶ್ ಸಾವು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಮೃತ ಸತೀಶ್‌ನ ತಂದೆ ಮಂಚಪ್ಪ ಅವರು ಈ ಬಗ್ಗೆ ಸೋಮವಾರ ಜಿಲ್ಲಾ ರಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

shivamogga live subscribe band

ಕೃಷಿ ಕೆಲಸ ಮಾಡಿಕೊಂಡಿದ್ದ ಸತೀಶ್‌ನನ್ನು ಅದೇ ಗ್ರಾಮದ ಪುಟ್ಟಪ್ಪ, ಆನಂದ ಎಂಬುವರು ಕೆಲಸವಿದೆ ಎಂದು ಕರೆದುಕೊಂಡು ಹೋಗಿದ್ದರು. ಅದೇ ದಿನ ಮಧ್ಯಾಹ್ನ 4.30ರ ಸುಮಾರಿಗೆ ಸತೀಶ್ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾಗಿ ತಿಳಿಸಿದ್ದರು. ಮೃತನ ಬಟ್ಟೆ ಮತ್ತು ಮೊಬೈಲ್ ಕೆರೆ ದಡದ ಮೇಲೆ ಇದ್ದವು. ಈ ವೇಳೆ ಪುಟ್ಟಪ್ಪ ಮತ್ತು ಆನಂದ ಜತೆಗೆ ಇಲ್ಲದೇ ಇರುವುದು ಅನುಮಾನ ಮೂಡಿಸಿದೆ. ಹಾಗಾಗಿ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

‘ನವೆಂಬರ್ 30ರಂದು ಹರಿಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಸತೀಶ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಆತನ ಪಾಲಕರು ದೂರು ನೀಡಿದ್ದಾರೆ. ಈಗಾಗಲೇ ಮರಣೋತ್ತರ ಪರೀಕ್ಷೆ ನಡೆಸಿದ್ದು ವರದಿಗಾಗಿ ಕಾಯುತ್ತಿದ್ದೇವೆ. ವರದಿಯಲ್ಲಿ ಕೊಲೆ ಎಂಬುದು ದೃಢಪಟ್ಟರೆ ಕೇಸ್‌ನ್ನು ಕೊಲೆ ಎಂದೇ ವರ್ಗಾಯಿಸಿಕೊಂಡು ತನಿಖೆ ನಡೆಸಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 7, 2021

Leave a Comment