BHADRAVATHI NEWS, 8 OCTOBER 2024 : ವಿಐಎಸ್ಎಲ್ ಕಾರ್ಖಾನೆಯಲ್ಲಿ ತಾಮ್ರದ ತಂತಿ (COPPER WIRE) ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ಬೈಕ್, ಆಟೋ ಮತ್ತು ತಾಮ್ರದ ತಂತಿಯನ್ನು ವಶಕ್ಕೆ ಪಡೆಯಲಾಗಿದೆ.
ಕಾರ್ಖಾನೆಯ ಸೆಂಟ್ರಲ್ ಎಲೆಕ್ಟ್ರಿಕ್ ವರ್ಕ್ ಶಾಪ್ ರಿಪೇರಿಗೆ ತರಿಸಲಾಗಿದ್ದ ವೆಲ್ಡಿಂಗ್ ಮೆಷಿನ್ನಲ್ಲಿದ್ದ 50 ಕೆ.ಜಿ ತೂಕದ ತಾಮ್ರದ ತಂತಿ ಕಳುವಾಗಿತ್ತು. ಈ ಸಂಬಂಧ ವಿಐಎಸ್ಎಲ್ ಕಾರ್ಖಾನೆಯ ಭದ್ರತಾ ಸಿಬ್ಬಂದಿ ನೀಡಿದ್ದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
![]() |
ಭದ್ರಾವತಿಯ ದೇವನರಸೀಪುರದ ಹೊಸ ಕೋಡಿಹಳ್ಳಿ ಗ್ರಾಮದ ವೆಂಕಟೇಶ ಅಲಿಯಾಸ್ ಬುಡ್ಡಾ, ಎಕಿನ್ಸಾ ಕಾಲೋನಿಯ ಮುನೀರ್ ಜಾನ್ ಅಲಿಯಾಸ್ ತಿಕಲ ಬಂಧಿತರು. 36,500 ರೂ. ಬೆಲೆಯ ತಾಮ್ರದ ತಂತಿ, ಕೃತ್ಯಕ್ಕೆ ಬಳಸಿದ್ದ ಬೈಕ್ ಮತ್ತು ಪ್ಯಾಸೆಂಜರ್ ಆಟೋವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭದ್ರಾವತಿ ಇನ್ಸ್ಪೆಕ್ಟರ್ ಶ್ರೀಶೈಲಕುಮಾರ್, ನ್ಯೂ ಟೌನ್ ಠಾಣೆ ಪಿಎಸ್ಐ ಟಿ.ರಮೇಶ್, ಎಎಸ್ಐ ಮಂಜಪ್ಪ, ಸಿಬ್ಬಂದಿ ನವೀನ್, ಪ್ರಸನ್ನ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ದಸರಾ ವೇದಿಕೆಯಲ್ಲಿ ನಟಿ ಉಮಾಶ್ರೀ ಗರಂ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200