ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021
ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಬೈಕ್ ಸವಾರರನ್ನು ಹಿಡಿದು, ಕೈಯಲ್ಲಿದ್ದ ಬ್ಯಾಗ್ ತಪಾಸಣೆಗೆ ಒಳಪಡಿಸಿದಾಗ ರಾಶಿ ರಾಶಿ ಮೊಬೈಲ್ ಪತ್ತೆಯಾಗಿವೆ. ಕಳ್ಳರನ್ನು ಬಂಧಿಸಿದ ಪೊಲೀಸರು ಮೊಬೈಲ್’ಗಳನ್ನು ವಶಕ್ಕೆ ಪಡೆದಿದ್ದಾರೆ.
ಭದ್ರಾವತಿ ಹೊಸಮನೆ ಬಡಾವಣೆಯ ಸಿ.ಶ್ರೀನಿವಾಸ್ (26) ಮತ್ತು ದುರ್ಗಿನಗರದ ಅಜಾಮ್ ಅಲಿಯಾಸ್ ಬಾಬು (38) ಬಂಧಿತರು.
ಬ್ಯಾಗ್’ನಲ್ಲಿತ್ತು ರಾಶಿ ರಾಶಿ ಮೊಬೈಲ್
ಮೊಬೈಲ್ ಕಳ್ಳರ ಕುರಿತು ಖಚಿತ ಮಾಹಿತಿ ಮೇರೆಗೆ, ಪೊಲೀಸರು ಭದ್ರಾವತಿಯ ಸೀಗೆಬಾಗಿ ಗಣಪತಿ ದೇಗುಲದ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಬೈಕ್’ನಲ್ಲಿ ಬಂದ ಇಬ್ಬರು ಯುವಕರು ಪೊಲೀಸರನ್ನು ಕಂಡು ಪರಾರಿಯಾಗಿಲು ಯತ್ನಿಸಿದ್ದಾರೆ. ಇವರನ್ನು ಹಿಡಿದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಇವರ ಬಳಿ ಇದ್ದ ಬ್ಯಾಗ್ ಪರಿಶೀಲನೆ ನಡೆಸಿದಾಗ ರಾಶಿ ರಾಶಿ ಮೊಬೈಲ್ ಪತ್ತೆಯಾಗಿದೆ.
10 ಲಕ್ಷದ ಮೊಬೈಲ್, ಲ್ಯಾಪ್ ಟಾಪ್
ಬ್ಯಾಗ್’ನಲ್ಲಿ ವಿವಿಧ ಕಂಪನಿಗಳ 120ಕ್ಕೂ ಹೆಚ್ಚು ಮೊಬೈಲ್ ಪತ್ತೆಯಾಗಿವೆ. ಇವುಗಳ ಮೌಲ್ಯ 10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇನ್ನು, ಬ್ಯಾಗ್’ನಲ್ಲಿ ಸುಮಾರು 20 ಸಾವಿರ ಮೌಲ್ಯದ ಡೆಲ್ ಕಂಪನಿಯ ಲ್ಯಾಪ್ ಟಾಪ್ ಸಿಕ್ಕಿದೆ.
ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ ಡಿಯೋ ಬೈಕನ್ನು ವಶಕ್ಕೆ ಪಡೆದಿದ್ದಾರೆ.
ಸಿಪಿಐ ರಾಘವೇಂದ್ರ ಕಾಂಡಿಕೆ ಮಾರ್ಗದರ್ಶನದಲ್ಲಿ ಎ.ಎಸ್.ಐ ಮಹೇಶ್ವರ ನಾಯ್ಕ, ಸಿಬ್ಬಂದಿ ವಿಜಯಕುಮಾರ್, ಪ್ರಸನ್ನ ಸ್ವಾಮಿ, ನವೀನ್ ಪವಾರ್, ಹಾಲಪ್ಪ, ನಾರಾಯಣ ಸ್ವಾಮಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200