SHIVAMOGGA LIVE NEWS | 19 AUGUST 2023
BHADRAVATHI / THIRTHAHALLI : ಪ್ರತ್ಯೇಕ ಪ್ರಕರಣಗಳಲ್ಲಿ ಭದ್ರಾವತಿ (Bhadravathi) ಮತ್ತು ತೀರ್ಥಹಳ್ಳಿಯಲ್ಲಿ (Thirthahalli) ಪೊಲೀಸರು ದಾಳಿ ನಡೆಸಿ ಗಾಂಜಾ ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ.
ಹಳೆ ಬಾರಂದೂರಿನಿಂದ ಭದ್ರಾವತಿಗೆ ಗಾಂಜಾ
ಹಳೆ ಬಾರಂದೂರು ಕಡೆಯಿಂದ ಭದ್ರಾವತಿಗೆ ಗಾಂಜಾ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ವೀರಾಪುರದ ಇಬ್ರಾಹಿಂ ಅಲಿಯಾಸ್ ಇಬ್ಬು ಮೀರಾ ಅಲಿಯಾಸ್ ಟಕ್ಕರ್ (21), ಕಡದಕಟ್ಟೆಯ ಸಂತೋಷ್ ಕುಮಾರ್ (30) ಬಂಧಿತರು. ಇವರಿಂದ 10 ಸಾವಿರ ರೂ. ಮೌಲ್ಯದ 161 ಗ್ರಾಂ ತೂಕದ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪೇಪರ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭದ್ರಾವತಿ ಡಿವೈಎಸ್ಪಿ ನಾಗರಾಜ್ ಮಾರ್ಗದರ್ಶನದಲ್ಲಿ ಪಿಎಸ್ಐ ಕವಿತಾ, ಪೇಪರ್ ಟೌನ್ ಠಾಣೆ ಪೊಲೀಸರು ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಸಂಚಾರ ಪೊಲೀಸರಿಂದ ಮತ್ತೆ ದಿಢೀರ್ ಕಾರ್ಯಾಚರಣೆ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ
ತೀರ್ಥಹಳ್ಳಿಯಲ್ಲಿ ಗಾಂಜಾ ಮಾರುತ್ತಿದ್ದಾಗ ದಾಳಿ
ಎಡೆಹಳ್ಳಿ ಕೆರೆ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ಪಿಎಸ್ಐ ಗಾದಲಿಂಗಪ್ಪ ಮತ್ತು ಸಿಬ್ಬಂದಿ ದಾಳಿ ನಡೆಸಿದರು. ತೀರ್ಥಹಳ್ಳಿಯ ಶಿವರಾಜಪುರದ ಸಂಜಯ್ ಅಲಿಯಾಸ್ ಪೋತ (25), ಕುರುವಳ್ಳಿಯ ಸುದೀಪ್ (21) ಬಂಧಿತರು. ಇವರಿಂದ 9 ಸಾವಿರ ರೂ. ಮೌಲ್ಯದ 190 ಗ್ರಾಂ ಗಾಂಜಾ (ganja drugs) ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಮಳೆ ಮಾಯ, ಭತ್ತ ನಾಟಿಗೆ ನೀರಿಲ್ಲ, ಹೊಲದಲ್ಲೆ ಒಣಗಿದ ಮೆಕ್ಕೆಜೋಳ, ಈ ಮಧ್ಯೆ ರೈತರಿಗೀಗ ಹೊಸ ಸಂಕಷ್ಟ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200