SHIMOGA | ಕಲ್ಲಗಂಗೂರು ಸ್ಪೋಟ ಕೇಸ್, ಸ್ಪೋಟಕ ಪೂರೈಕೆ ಮಾಡಿದ್ದ ಅಪ್ಪ, ಮಗ ಮುಂಬೈನಲ್ಲಿ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021

ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಸಂಬಂಧ ಸ್ಪೋಟಕ ಪೂರೈಕೆ ಮಾಡಿದ್ದ ಆಂಧ್ರ ಪ್ರದೇಶದ ಆರೋಪಿಗಳು ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಇದರಿಂದ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಆಂಧ್ರ ಪ್ರದೇಶದ ಅನಂತಪುರದ ಪಿ.ಶ್ರೀರಾಮುಲು (68), ಆತನ ಪುತ್ರ ಪಿ.ಮಂಜುನಾಥ ಸಾಯಿ (36), ಕಲ್ಲಗಂಗೂರಿನ ಕ್ರಷರ್ ಜಾಗದ ಮಾಲೀಕ ಶಂಕರಗೌಡ ಕುಲಕರ್ಣಿ (76), ಆತನ ಪುತ್ರ ಅವಿನಾಶ್ ಕುಲಕರ್ಣಿ (43) ಬಂಧಿತರು.

ಮುಂಬೈನಲ್ಲಿ ಸಿಕ್ಕಿಬಿದ್ದ ಶ್ರೀರಾಮುಲು

ಶ್ರೀರಾಮುಲು ಮತ್ತು ಮಂಜುನಾಥ ಸಾಯಿ ಮುಂಬೈನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿದ್ದ ಶಿವಮೊಗ್ಗ ಮಹಿಳಾ ಠಾಣೆ ಇನ್ಸ್‍ ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್, ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಸಂಜೀವ್ ಕುಮಾರ್, ಎಎಸ್‍ಐ ವಿಜಯ್, ಕಿರಣ್ ಮೋರೆ ಅವರನ್ನು ಒಳಗೊಂಡ ತಂಡ ಇಬ್ಬರನ್ನು ಬಂಧಿಸಿದೆ.

ಆಂಧ್ರಕ್ಕೂ ತೆರಳಿದ್ದ ಟೀಮ್‍

ಸ್ಪೋಟ ಸರಬರಾಜು ಸಂಬಂಧ ತನಿಖೆ ನಡೆಸಲು ಆಂಧ್ರದ ಅನಂತಪುರಕ್ಕೂ ಶಿವಮೊಗ್ಗ ಪೊಲೀಸರ ಒಂದು ತಂಡ ಕಳುಹಿಸಲಾಗಿತ್ತು ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ತುಂಗಾ ನಗರ ಠಾಣೆ ಇನ್ಸ್‍ ಪೆಕ್ಟರ್ ದೀಪಕ್ ಮತ್ತು ಸೊರಬ ಠಾಣೆ ಇನ್ಸ್ ಪೆಕ್ಟರ್ ಮರುಳಸಿದ್ದಪ್ಪ ನೇತೃತ್ವದ ತಂಡ ಆಂಧ್ರಕ್ಕೆ ತೆರಳಿತ್ತು.

ಅಲ್ಲಿ ಪರವಾನಗಿ ಹೊಂದಿದ್ದ ಸ್ಪೋಟಕ ಗೋದಾಮು ಸ್ಥಾಪಿಸಿದ್ದ  ಶ್ರೀರಾಮುಲು, ಅಕ್ರಮವಾಗಿ ಸ್ಪೋಟಕ ದಾಸ್ತಾನು ಮಾಡಿದ್ದು, ಲೈಸೆನ್ಸ್ ಇಲ್ಲದೆಯೆ ಸ್ಪೋಟಕ ಪೂರೈಕೆ ಮಾಡಿರುವ ಮಾಹಿತಿ ಸಂಗ್ರಹಿಸಿತ್ತು. ಈ ಸಂಬಂಧ ಗುಮ್ಮಟಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 6, 2021

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment