ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 28 ಜುಲೈ 2021
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೃತರಾದ ಸವಾರರ ಗುರುತು ಪತ್ತೆಯಾಗಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ತಾಲೂಕಿನ ಬೂದಿಗೆರೆಯ ಪ್ರಭು (22) ಮತ್ತು ರಮೇಶ್ (25) ಮೃತರು. ಇವರು ಬೆಜ್ಜವಳ್ಳಿ ಕಡೆಯಿಂದ ಆಯನೂರು ಕಡೆಗೆ ಬರುವ ರಸ್ತೆಯಲ್ಲಿ ಹೊರಬೈಲು ಬಳಿ ಬೈಕ್ನಲ್ಲಿ ಬರುವಾಗ ಅಪಘಾತವಾಗಿದೆ.
ಹೇಗಾಯ್ತು ಅಪಘಾತ?
ಪ್ರಭು ಬೈಕ್ ಚಲಾಯಿಸುತ್ತಿದ್ದ. ಅತಿ ವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಓಡಿಸಿದ್ದರಿಂದ ಘಟನೆ ಸಂಭವಿಸಿದೆ. ರಸ್ತೆಯ ಎಡ ಭಾಗದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200