ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 18 JUNE 2023
THIRTHAHALLI : ತುಂಗಾ ನದಿಯಲ್ಲಿ (Tunga River) ಈಜಲು ತೆರಳಿದ್ದ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ (Tunga River) ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು. ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಮನೆಯಲ್ಲಿ ಇಂಜಿನಿಯರ್ ಪತ್ನಿಯ ಮೃತದೇಹ, ಪೊಲೀಸ್, ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಸ್ಥಳಕ್ಕೆ ದೌಡು
ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು






