SHIVAMOGGA LIVE NEWS | 24 MAY 2024
AYANURU : ಕೃಷಿ ಹೊಂಡದಲ್ಲಿ (Farm Pond) ಮುಳುಗಿ ಇಬ್ಬರು ಸಾವಿಗೀಡಾಗಿದ್ದಾರೆ. ಆಯನೂರು ಸಮೀಪದ ಚೆನ್ನಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ಮಹೇಶ್ ಅವರ ಪುತ್ರ ಅಭಯ್ (16), ಮಾಲತೇಶ್ (28) ಮೃತ ದುರ್ದೈವಿಗಳು.
![]() |

ಗ್ರಾಮದಲ್ಲಿ ಜಮೀನಿನಲ್ಲಿ ಟ್ರ್ಯಾಕ್ಟರ್ನಲ್ಲಿ ಮಾಲತೇಶ್ ಉಳುಮೆ ಮಾಡುತ್ತಿದ್ದ. ಜತೆಗೆ ಮಹೇಶ್ ಅವರ ಮಗ ಅಭಯ್ ಕೂಡ ಅಲ್ಲಿಗೆ ಹೋಗಿದ್ದ. ಕೃಷಿ ಹೊಂಡದ ಪಕ್ಕ ನಿಂತಿದ್ದ ಅಭಯ್ ಆಯತಪ್ಪಿ ಹೊಂಡಕ್ಕೆ ಬಿದ್ದು ಮೇಲೆ ಬರಲಾಗದೆ ಒದ್ದಾಡುತ್ತಿದ್ದರು. ಕೂಡಲೆ ಮಾಲತೇಶ್ ರಕ್ಷಣೆಗೆ ಧಾವಿಸಿದ್ದರು. ಸುಮಾರು 10 ಅಡಿಯ ಕೃಷಿ ಹೊಂಡದಿಂದ ಮೇಲೆ ಬರಲಾಗದೆ ಇಬ್ಬರು ಮುಳುಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ – ಆಯನೂರು ಬಳಿ ಮುಖಾಮುಖಿ ಡಿಕ್ಕಿ, ಒಬ್ಬನ ಕಾಲು ಕಟ್, ಹೇಗಾಯ್ತು ಘಟನೆ?
ವಿಷಯ ತಿಳಿದು ಗ್ರಾಮಸ್ಥರು ಇಬ್ಬರ ಮೃತದೇಹಗಳನ್ನು ಮೇಲೆತ್ತಿದ್ದಾರೆ. ಗಿರಿದೀಪಂ ಶಾಲೆಯ ವಿದ್ಯಾರ್ಥಿ ಅಭಯ್ ಈ ಬಾರಿ 9ನೇ ತರಗತಿಗೆ ಹೋಗಬೇಕಿತ್ತು. ಮಾಲತೇಶ್ಗೆ ಎಂಟು ತಿಂಗಳ ಹಿಂದೆ ಮದುವೆಯಾಗಿತ್ತು. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200