ಶಿವಮೊಗ್ಗದ ಗೋಪಾಳದಲ್ಲಿ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ ನಡೆದ ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ತುಂಗಾ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ.
ರಂಗನಾಥ ಬಡಾವಣೆಯ ಸಲ್ಮಾನ್ (20), ಅಣ್ಣಾನಗರದ ಸೈಯದ್ ಸುಬಾನ್ (18) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಅಸ್ಲಾಂ ಎಂಬಾತನಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ.
ವಾಕಿಂಗ್ ಹೋದವರ ಮೇಲೆ ಹಲ್ಲೆ
ಪದ್ಮಾ ಟಾಕೀಸ್ ಬಳಿ ವೆಂಕಟೇಶ್ ಎಂಬುವವರು ನಾಯಿ ಹಿಡಿದುಕೊಂಡು ವಾಕಿಂಗ್ ತೆರಳುತ್ತಿದ್ದರು. ಈ ವೇಳೆ ಅವರ ಮೇಲೆ ಸಲ್ಮಾನ್, ಸೈಯದ್ ಸುಬಾನ್, ಅಸ್ಲಾಂ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ. ಕಲ್ಲಿನಿಂದ ತಲೆಗೆ ಹಲ್ಲೆ ಮಾಡಿದ್ದರಿಂದ ವೆಂಕಟೇಶ್ ಅವರು ಗಾಯಗೊಂಡಿದ್ದರು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ವಾಕಿಂಗ್ ತೆರಳಿದ್ದ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಸಂಸದ ಸೇರಿ ಹಲವರು ಆಸ್ಪತ್ರೆಗೆ ದೌಡು
ಜಾಗಳ ಆಡುತ್ತ ನಿಂತಿದ್ದರು
ವೈನ್ ಶಾಪ್’ನಲ್ಲಿ ಕುಡಿದು ಸಲ್ಮಾನ್, ಸೈಯದ್ ಸುಬಾನ್, ಅಸ್ಲಾಂ ರಸ್ತೆಯಲ್ಲಿ ಬರುತ್ತಿದ್ದರು. ಎದುರಿಗೆ ಸಿಕ್ಕ ಫೋಟೊಗ್ರಾಫರ್ ಚಿನ್ನು ಎಂಬಾತನೊಂದಿಗೆ ಕ್ಯಾಮರಾ ಬಾಡಿಗೆ ವಿಚಾರವಾಗಿ ಜಗಳವಾಡುತ್ತಿದ್ದರು.
ಅದೆ ಸಮಯಕ್ಕೆ ವೆಂಕಟೇಶ್ ಅವರು ನಾಯಿ ಹಿಡಿದುಕೊಂಡು ವಾಕಿಂಗ್ ಬಂದಿದ್ದಾರೆ. ಮೊಬೈಲ್’ನಲ್ಲಿ ಮಾತನಾಡುತ್ತ ಬರುತ್ತಿದ್ದಾಗ, ಸಲ್ಮಾನ್, ಸೈಯದ್ ಸುಬಾನ್, ಅಸ್ಲಾಂ, ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತುಂಗಾ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200