ಶಿವಮೊಗ್ಗದ ಗೋಪಾಳದಲ್ಲಿ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ ನಡೆದ ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ತುಂಗಾ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಂಗನಾಥ ಬಡಾವಣೆಯ ಸಲ್ಮಾನ್ (20), ಅಣ್ಣಾನಗರದ ಸೈಯದ್ ಸುಬಾನ್ (18) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಅಸ್ಲಾಂ ಎಂಬಾತನಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ.
ವಾಕಿಂಗ್ ಹೋದವರ ಮೇಲೆ ಹಲ್ಲೆ
ಪದ್ಮಾ ಟಾಕೀಸ್ ಬಳಿ ವೆಂಕಟೇಶ್ ಎಂಬುವವರು ನಾಯಿ ಹಿಡಿದುಕೊಂಡು ವಾಕಿಂಗ್ ತೆರಳುತ್ತಿದ್ದರು. ಈ ವೇಳೆ ಅವರ ಮೇಲೆ ಸಲ್ಮಾನ್, ಸೈಯದ್ ಸುಬಾನ್, ಅಸ್ಲಾಂ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ. ಕಲ್ಲಿನಿಂದ ತಲೆಗೆ ಹಲ್ಲೆ ಮಾಡಿದ್ದರಿಂದ ವೆಂಕಟೇಶ್ ಅವರು ಗಾಯಗೊಂಡಿದ್ದರು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ವಾಕಿಂಗ್ ತೆರಳಿದ್ದ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಸಂಸದ ಸೇರಿ ಹಲವರು ಆಸ್ಪತ್ರೆಗೆ ದೌಡು
ಜಾಗಳ ಆಡುತ್ತ ನಿಂತಿದ್ದರು
ವೈನ್ ಶಾಪ್’ನಲ್ಲಿ ಕುಡಿದು ಸಲ್ಮಾನ್, ಸೈಯದ್ ಸುಬಾನ್, ಅಸ್ಲಾಂ ರಸ್ತೆಯಲ್ಲಿ ಬರುತ್ತಿದ್ದರು. ಎದುರಿಗೆ ಸಿಕ್ಕ ಫೋಟೊಗ್ರಾಫರ್ ಚಿನ್ನು ಎಂಬಾತನೊಂದಿಗೆ ಕ್ಯಾಮರಾ ಬಾಡಿಗೆ ವಿಚಾರವಾಗಿ ಜಗಳವಾಡುತ್ತಿದ್ದರು.

ಅದೆ ಸಮಯಕ್ಕೆ ವೆಂಕಟೇಶ್ ಅವರು ನಾಯಿ ಹಿಡಿದುಕೊಂಡು ವಾಕಿಂಗ್ ಬಂದಿದ್ದಾರೆ. ಮೊಬೈಲ್’ನಲ್ಲಿ ಮಾತನಾಡುತ್ತ ಬರುತ್ತಿದ್ದಾಗ, ಸಲ್ಮಾನ್, ಸೈಯದ್ ಸುಬಾನ್, ಅಸ್ಲಾಂ, ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತುಂಗಾ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






