SHIVAMOGGA LIVE | 28 JUNE 2023
SHIMOGA : ವಿದ್ಯುತ್ ತಂತಿ ತಗುಲಿ (Electric Shock) ಇಬ್ಬರು ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಇಲ್ಲಿನ ಡಾ. ಅಂಬೇಡ್ಕರ್ ಭವನದ ಮುಂಭಾಗ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಹೇಗಾಯ್ತು ಘಟನೆ?
ತಗಡಿನ ಶೀಟ್ಗಳನ್ನು ನಿರ್ಮಾಣ ಹಂತದ ಕಟ್ಟಡದ ಮೇಲ್ಭಾಗಕ್ಕೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ವಿದ್ಯುತ್ ಕಂಬಿಗಳಿಗೆ ತಗಡಿನ ಶೀಟ್ ತಗುಲಿದೆ ಎಂದು ಹೇಳಲಾಗುತ್ತಿದೆ. ವಿದ್ಯುತ್ ಶಾಕ್ ಹೊಡೆದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಅಸುನೀಗಿದ್ದಾರೆ. ವಿದ್ಯುತ್ ಕಂಬಿಗಳು ಕಟ್ಟಡಕ್ಕೆ ತೀರ ಸಮೀಪದಲ್ಲಿದೆ. ಹಾಗಾಗಿ ಶೀಟ್ ಮೇಲೆತ್ತುವಾಗ ಕಂಬಿಗಳಿಗೆ ತಗುಲಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ – ಮದುವೆ ಮನೆಯಲ್ಲಿ ಸೂತಕದ ಛಾಯೆ, ಮರುಗಿದ ಜನತೆ, ಆಗಿದ್ದೇನು?
ವಿದ್ಯುತ್ ಶಾಕ್ಗೆ (Electric Shock) ಒಳಗಾಗಿದ್ದ ಕಾರ್ಮಿಕರನ್ನು ಕೂಡಲೆ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗಾಗಲೆ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದರು. ಮೃತರ ಪೈಕಿ ಒಬ್ಬಾತನ ಗುರುತು ಪತ್ತೆಯಾಗಿದ್ದು ಗುಂಟೂರು ಮೂಲದ ಸೋಮಶೇಖರ್ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಟಿಪ್ಪು ನಗರ, ದ್ರೌಪದಮ್ಮ ಸರ್ಕಲ್ನಲ್ಲಿ ಪ್ರತ್ಯೇಕ ಹಲ್ಲೆ ಕೇಸ್, ಈವರೆಗೂ 10 ಮಂದಿ ಅರೆಸ್ಟ್
ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200