SHIVAMOGGA LIVE NEWS | 16 APRIL 2024
SHIMOGA : ತುಂಗಾ ನದಿಯ ರೈಲ್ವೆ ಸೇತುವೆ ಪಕ್ಕದಲ್ಲಿ ಸಿಕ್ಕಿ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಈ ಹಿನ್ನೆಲೆ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.
ಏ.13 ರಂದು ಹೊಳೆ ಬಸ್ ಸ್ಟಾಪ್ ರೈಲ್ವೆ ಸೇತುವೆ ಕೆಳಗೆ ತುಂಗಾ ನದಿಯಲ್ಲಿ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯು ಮೃತಪಟ್ಟಿದ್ದಾನೆ. ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈತ ಸುಮಾರು 5.02 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ ಹೊಂದಿದ್ದು, ತಲೆಯಲ್ಲಿ 2 ಇಂಚು ಉದ್ದದ ಕಪ್ಪು ಕೂದಲು ಹಾಗೂ ಕುರುಚಲು ಗಡ್ಡ ಇದೆ. ಮೃತನ ಮೈಮೇಲೆ ತಿಳಿಹಸಿರು ತಿಳಿಕೇಸರಿ ಮಿಶ್ರಿತ ಬಣ್ಣದ ತುಂಬುತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದಾನೆ. ಈತನ ವಾರಸುದಾರರು ಪತ್ತೆಯಾದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ – ವಿಐಎಸ್ಎಲ್ನ ಅಧಿಕಾರಿ ಶಿವಮೊಗ್ಗದ ಸಂಸದರಾಗಿದ್ದರು, ಹೇಗದು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200