SHIVAMOGGA LIVE NEWS | 30 OCTOBER 2023
SHIMOGA : ಕೇಂದ್ರ ಕಾರಾಗೃಹದಿಂದ (Central Jail) ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿದ್ದ ಆರೋಪದ ಮೇಲೆ ನಾಲ್ವರು ವಿಚಾರಣಾಧೀನ ಖೈದಿಗಳ ವಿರುದ್ಧ ಜೈಲು ಅಧೀಕ್ಷಕಿ ಡಾ. ಅನಿತಾ ಅವರು ದೂರು ನೀಡಿದ್ದಾರೆ.
![]() |
ವಿಚಾರಣಾಧೀನ ಖೈದಿಗಳಾದ ಮುಬಾರಕ್ ಅಲಿಯಾಸ್ ಡಿಚ್ಚಿ, ಸೈಯದ್ ಟಿಪ್ಪು ಸುಲ್ತಾನ್, ಶಾಬಾಜ್ ಷರೀಫ್, ಜಬೀರ್ ಪಾಷಾ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್ 7ರಂದು ನಾಲ್ವರು ಆರೋಪಿಗಳು ಇನ್ಸ್ಟಾಗ್ರಾಂ ಮೂಲಕ ತಮ್ಮ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ- ಆನಂದಪುರದ ಅಂಗಡಿಗಳ ಬಾಗಿಲ ಬೀಗ ಒಡೆದ ಕಳ್ಳರು, ಏನೇನೆಲ್ಲ ಕದ್ದಿದ್ದಾರೆ?
ವಿಡಿಯೋಗಳನ್ನು ಪರಿಶೀಲಿಸಿದಾಗ ನಾಲ್ವರು ಆರೋಪಿಗಳಿಗೆ ಹೋಲಿಕೆ ಕಂಡು ಬಂದಿದೆ. ಈ ಹಿನ್ನೆಲೆ ಕಾರಗೃಹ ಮತ್ತು ಸುಧಾರಣಾ ಸೇವೆಯ ಉಪ ಮಹಾ ನಿರೀಕ್ಷಕರ ಸೂಚನೆ ಮೇರೆಗೆ ಅಧೀಕ್ಷಕಿ ಅನಿತಾ ಅವರು ದೂರು ನೀಡಿದ್ದಾರೆ. ಆರೋಪಿಗಳಿದ್ದ ಜೈಲಿನ ಸೆಲ್ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಯಾವುದೆ ಮೊಬೈಲ್ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200