SHIVAMOGGA LIVE NEWS | 24 FEBRUARY 2024
SHIMOGA : ವಿಚಾರಣಾಧೀನ ಕೈದಿಯೊಬ್ಬ ಗುದದ್ವಾರದಲ್ಲಿ ಗಾಂಜಾ ಬಚ್ಚಿಟ್ಟುಕೊಂಡು ಜೈಲಿನೊಳಗೆ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ಆತನ ವಿರುದ್ಧ ಜೈಲು ಸೂಪರಿಂಟೆಂಡೆಂಟ್ ಅವರು ದೂರು ನೀಡಿದ್ದು, ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿ ಸಚಿನ್ ಎಂಬಾತನನ್ನು ಹಾಸನದ ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯಲಾಗಿತ್ತು. ಫೆ.19ರಂದು ಆತ ಜೈಲಿಗೆ ಮರಳಿದ್ದ. ಜೈಲಿನೊಳಗೆ ತೆರಳುವ ಮುನ್ನ ಸಚಿನ್ನನ್ನು ಪರಿಶೀಲಿಸಿದಾಗ ಗುದದ್ವಾರದಲ್ಲಿ ಹಳದಿ ಬಣ್ಣದ ಪೇಪರ್ನಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿತ್ತು. ಅದನ್ನು ವಶಕ್ಕೆ ಪಡೆದ ಕೆಎಸ್ಐಎಸ್ಎಫ್ ಸಿಬ್ಬಂದಿ, ಪರಿಶೀಲಿಸಿದಾಗ ಗಾಂಜಾ ಇರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ – ಶಿವಮೊಗ್ಗ ತಹಶೀಲ್ದಾರ್ ನೇತೃತ್ವದಲ್ಲಿ ಟಾಸ್ಕ್ಫೋರ್ಸ್ ಮೀಟಿಂಗ್, 4 ಪ್ರಮುಖ ವಿಚಾರಗಳ ಮಹತ್ವದ ಚರ್ಚೆ, ಏನೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200