ಹೊಸಮನೆಯಲ್ಲಿ ಕುತ್ತಿಗೆ ಮೇಲೆ ರಾಡ್ ಬಿದ್ದು ಎಂಟು ವರ್ಷದ ಬಾಲಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 4 ಜನವರಿ 2020

ವೆಲ್ಡಿಂಗ್ ಶಾಪ್’ನವರ ನಿರ್ಲಕ್ಷ್ಯಕ್ಕೆ ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಬಾಲಕ ಬಲಿಯಾಗಿದ್ದಾನೆ. ಕುತ್ತಿಗೆ ಮೇಲೆ ರಾಡ್ ಬಿದ್ದು ಎಂಟು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.

ಯುವರಾಜ್ (8) ಮೃತ ಬಾಲಕ. ಮನೆಯಿಂದ ಅಂಗಡಿಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಹೊಸಮನೆ ಬಡಾವಣೆಯ ಚಾನಲ್ ಏರಿಯಾದಲ್ಲಿರುವ ವೆಂಕಟೇಶ್ವರ ಇಂಡಸ್ಟ್ರೀಸ್ ವೆಲ್ಡಿಂಗ್ ಶಾಪ್’ನವರು, ದೊಡ್ಡದೊಂಡು ರಾಡ್’ಗೆ ಬಣ್ಣ ಹಚ್ಚುತ್ತಿದ್ದರು. ಈ ವೇಳೆ ರಾಡ್ ಜಾರಿ, ದಾರಿಯಲ್ಲಿ ಹೋಗುತ್ತಿದ್ದ ಯುವರಾಜ್ ಮೇಲೆ ಬಿದ್ದಿದೆ ಎಂದು ಹೇಳಲಾಗುತ್ತಿದೆ.

ಕೂಡಲೇ ಯುವರಾಜ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದ್ದರಿಂದ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಯುವರಾಜ್ ಕೊನೆಯುಸಿರೆಳೆದಿದ್ದಾನೆ. ಒಂದು ವರ್ಷದ ಹಿಂದೆ ಯುವರಾಜನ ತಂದೆ ತೀರಿಕೊಂಡಿದ್ದರು. ತಾಯಿ ಅಂಬಿಕಾ ಬೇರೆಯವರ ಮನೆಯಲ್ಲಿ ಕೆಲಸ ಮಾಡಿ, ಮಗನನ್ನು ಬೆಳೆಸುತ್ತಿದ್ದರು. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment