ಶಿವಮೊಗ್ಗ ಬಸ್‌ ನಿಲ್ದಾಣದಲ್ಲಿ ನಿದ್ರೆ ಮಾಡ್ತಿದ್ದ ಮಹಿಳೆಗೆ ದೊಣ್ಣೆ ಏಟು, ಕಣ್ಣು ಬಿಟ್ಟ ಮೇಲೆ ಮತ್ತೊಂದು ಆಘಾತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮಹಿಳೆಯರ (Woman) ವಿಶ್ರಾಂತಿ ಕೊಠಡಿಯಲ್ಲಿ ಕುಳಿತಿದ್ದ ರಾಣೇಬೆನ್ನೂರಿನ ರೇಣುಕಮ್ಮ ಎಂಬುವವರ ಮೇಲೆ ಮಹಿಳೆಯೊಬ್ಬಳು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ರೇಣುಕಮ್ಮ ಅವರ ವ್ಯಾನಿಟಿ ಬ್ಯಾಗಿನಲ್ಲಿದ್ದ ₹1000 ನಗದು ಕಸಿದುಕೊಂಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರೇಣುಕಮ್ಮ ತಮ್ಮ ಪತಿಯೊಂದಿಗೆ ಹಣಗೆರೆ ಕಟ್ಟೆಗೆ ತೆರಳಬೇಕಿತ್ತು. ರಾತ್ರಿ ರೇಣುಕಮ್ಮ ಮತ್ತು ಪತಿ ಬಸ್‌ ನಿಲ್ದಾಣದಕ್ಕೆ ಬರುವಷ್ಟರಲ್ಲಿ ಖಾಸಗಿ ಬಸ್ಸು ಹೋಗಿತ್ತು. ಹಾಗಾಗಿ ಕೆಎಸ್‌ಆರ್‌ಟಿಸಿ ನಿಲ್ದಾಣದ ಮಹಿಳೆಯರ ವಿಶ್ರಾಂತಿ ಜಾಗದಲ್ಲಿ ಕುಳಿತಿದ್ದರು. ಅಲ್ಲಿಯೆ ನಿದ್ರೆ ಮಾಡಿದ್ದ ರೇಣುಕಮ್ಮ ಅವರ ಮೇಲೆ ರಾತ್ರಿ 11.45ರ ಹೊತ್ತಿಗೆ ಮಹಿಳೆಯೊಬ್ಬಳು ದೊಣ್ಣೆಯಿಂದ ಹೊಡೆದಿದ್ದಾರೆ. ಎಚ್ಚರವಾದಾಗ ಆಕೆ ಅವಾಚ್ಯವಾಗಿ ನಿಂದಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಹಲ್ಲೆ ನಡೆಸಿದ ಮಹಿಳೆ ರೇಣುಕಮ್ಮ ಅವರ ವ್ಯಾನಿಟಿ ಬ್ಯಾಗ್‌ನಿಂದ ಹಣವನ್ನು ಕಸಿದುಕೊಂಡಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಹಾಪ್‌ಕಾಮ್ಸ್‌ಗೆ 15 ನಿರ್ದೇಶಕರು ಅವಿರೋಧ ಆಯ್ಕೆ, ವಿಜಯ್‌ಕುಮಾರ್‌ ಹ್ಯಾಟ್ರಿಕ್‌ ಸಾಧನೆ

Woman

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment