ಶಿವಮೊಗ್ಗ LIVE
ಶಿವಮೊಗ್ಗ: ಕರ್ನಾಟಕ ಸಂಘದ ಎದುರಿಗೆ ಇರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ (Bank ATM) ಮಹಿಳೆಯೊಬ್ಬರಿಗೆ ನಂಬಿಸಿ ಹಣ ದೋಚಿರುವ ಘಟನೆ ನಡೆದಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವವರಿಗೆ GOOD NEWS, ಇಲ್ಲಿದೆ ಉತ್ತಮ ವೇತನದ ಉದ್ಯೋಗ
ಹೊಳೆಹೊನ್ನೂರಿನ ಶಿವಮ್ಮ ಎಂಬುವವರು ಹಣ ಬಿಡಿಸಲು ಎಟಿಎಂ ಕೇಂದ್ರಕ್ಕೆ ಹೋಗಿದ್ದರು. ಅಲ್ಲಿಯೇ ಇದ್ದ ಅಪರಿಚಿತ ವ್ಯಕ್ತಿಯೊಬ್ಬ ಹಣ ಬಿಡಿಸಿಕೊಡುವುದಾಗಿ ನಂಬಿಸಿದ್ದಾನೆ. ಆತನ ಮಾತು ನಂಬಿ ಮಹಿಳೆಯು ತನ್ನ ಎಟಿಎಂ ಕಾರ್ಡ್ ಹಾಗೂ ಪಿನ್ ನೀಡಿದ್ದಾರೆ.
ವ್ಯಕ್ತಿಯು ಹಣ ಬರುತ್ತಿಲ್ಲ ಎಂದು ಸುಳ್ಳು ಹೇಳಿ, ಮಹಿಳೆಗೆ ಅವರ ಕಾರ್ಡ್ ಬದಲಿಗೆ ಬೇರೊಂದು ಕಾರ್ಡ್ ನೀಡಿ ವಂಚಿಸಿದ್ದಾನೆ. ನಂತರ ಮಹಿಳೆಯು ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಒಟ್ಟು ₹24,300 ಹಣ ಡ್ರಾ ಆಗಿರುವುದು ಬೆಳಕಿಗೆ ಬಂದಿದೆ. ಎಟಿಎಂ ಕಾರ್ಡ್ ಪರಿಶೀಲಿಸಿದಾಗ ಅದು ತಮ್ಮದಲ್ಲ ಎಂಬುದು ದೃಢಪಟ್ಟಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





