ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | RIPPONPETE NEWS | 4 ಫೆಬ್ರವರಿ 2022
ನಾಲ್ಕು ವರ್ಷದ ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ ಮತ್ತು ಆತನ ಮನೆಯವರ ಕಿರುಕುಳವೆ ಘಟನೆ ಕಾರಣ ಎಂದು ಮಹಿಳೆಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ಹೊಸನಗರ ತಾಲೂಕು ಬಿದರಹಳ್ಳಿಯ ಚಿಟ್ಟೆಗದ್ದೆಯ ವಿದ್ಯಾ (32), ಮಗಳು ತನ್ವಿ (4) ಮೃತರು. ಮನೆ ಬಳಿಯ ಬಾವಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.
ಬೆಳಗಿನ ಜಾವ ಬಾವಿಗೆ ಹಾರಿದ್ದಾರೆ
ಗುರುವಾರ ಬೆಳಗಿನ ಜಾವ ವಿದ್ಯಾ, ಮಗಳು ತನ್ವಿಯನ್ನು ಬಾವಿ ಬಳಿಗೆ ಕರೆದೊಯ್ದಿದ್ದಾರೆ. ವೇಲ್’ನಿಂದ ತನ್ವಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ವಿದ್ಯಾ ಅವರ ಮೊದಲನೆ ಮಗಳು ಪುಣ್ಯಾ ಬೆಳಗಿನ ಜಾವ ಎಚ್ಚರಗೊಂಡಿದ್ದಾಳೆ. ತಾಯಿ ಮತ್ತು ತಂಗಿ ಕಾಣದಿದ್ದರಿಂದ ತಂದೆ ಲೋಹಿತ್ ಅವರನ್ನು ಎಬ್ಬಿಸಿದ್ದಾಳೆ. ವಿದ್ಯಾ ಮತ್ತು ತನ್ವಿಗಾಗಿ ಮನೆ ಸುತ್ತಮುತ್ತಲು ಹುಡುಕಾಟ ನಡೆಸಿದ್ದಾರೆ.
ಬಾವಿಯಲ್ಲಿ ಮೃತದೇಹ ಪತ್ತೆ
ವಿದ್ಯಾ ಮತ್ತು ತನ್ವಿಯ ಮೃತದೇಹವು ಮನೆಯ ಮುಂಭಾಗದ ಬಾವಿಯಲ್ಲಿ ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದರು. ಅಗ್ನಿಶಾಮಕ ಸಿಬ್ಬಂದಿ ಬಾವಿಗಿಳಿದು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.
ಪತಿ, ಕುಟುಂಬದ ವಿರುದ್ಧ ದೂರು
ವಿದ್ಯಾ ಮತ್ತು ತನ್ವಿ ಆತ್ಮಹತ್ಯೆ ಪ್ರಕರಣ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕಾರಿಪುರ ತಾಲೂಕು ಮುಡುಬ ಸಿದ್ದಾಪುರದ ವಿದ್ಯಾ ಅವರನ್ನು 2014ರಲ್ಲಿ ಹೊಸನಗರ ತಾಲೂಕು ಬಿದರಹಳ್ಳಿಯ ಚಿಟ್ಟೆಗದ್ದೆಯ ಲೋಹಿತ್ ಅವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಆದರೆ ಇತ್ತೀಚೆಗೆ ಲೋಹಿತ್ ಅವರ ಮನೆಯವರು ಕಿರುಕುಳ ನೀಡುತ್ತಿದ್ದರಿಂದ ತಮ್ಮ ಮಗಳು, ಮೊಮ್ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಬಾವಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Shimoga District Profile | About Shivamogga Live
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















