SHIVAMOGGA LIVE NEWS | 10 APRIL 2023
SORABA : ಒಂದೂವರೆ ತಿಂಗಳ ಹೆಣ್ಣು ಮಗುವಿನೊಂದಿಗೆ (Baby) ಕೆರೆಗೆ ಹಾರಿ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆಯಲ್ಲಿ ಮಗುವಿನ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಶೋಧ ಕಾರ್ಯ ನಡೆಸಿದಾಗ ಮಗುವಿನೊಂದಿಗೆ ತಾಯಿಯು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಸೊರಬ ತಾಲೂಕು ಕುಪ್ಪಗಡ್ಡೆ ಗ್ರಾಮದ ತುಂಬೆ ಹೊಂಡದಲ್ಲಿ ಘಟನೆ ಸಂಭವಿಸಿದೆ. ಶಾಂತಾ (28), ಒಂದೂವರೆ ತಿಂಗಳ ಹೆಣ್ಣು ಮಗು ಮಂಗಳಾ ಗೌರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಫ್ಲೈ ಓವರ್ ಬಳಿ ಅಪಘಾತ, ಲಾರಿ ಕೆಳಗೆ ಸಿಲುಕಿದ ಬೈಕ್ ಸವಾರ, ಚಾಲಕ ಎಸ್ಕೇಪ್
ತಾಯಿ ಹಾಲು ಕಡಿಮೆಯಾಗಿದ್ದು ಮಗು ಸೊರಗಿದೆ ಎಂದು ಶಾಂತಾ ಮಾನಸಿಕವಾಗಿ ಕುಗ್ಗಿದ್ದರು ಎಂದು ಹೇಳಲಾಗುತ್ತಿದೆ. ಇದೆ ಕಾರಣಕ್ಕೆ ಶನಿವಾರ ರಾತ್ರಿ ಶಾಂತಾ, ಮಗುವಿನೊಂದಿಗೆ (Baby) ತುಂಬೆ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಭಾನುವಾರ ಬೆಳಗ್ಗೆ ಕೆರೆಯಲ್ಲಿ ಮಗುವಿನ ಮೃತದೇಹ ಗಮನಿಸಿದ ಸ್ಥಳೀಯರು ಆನವಟ್ಟಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ – ದೇವರ ಕಾರ್ಯಕ್ಕೆ ಊರಿಗೆ ಹೋದವರಿಗೆ ಎದುರು ಮನೆಯವರಿಂದ ಬಂತು ಆಘಾತಕಾರಿ ಫೋನ್ ಕರೆ
ಶಾಂತಾಳನ್ನು ಜಡ್ಡಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಬಾಣಂತನಕ್ಕಾಗಿ ಕುಪ್ಪಗಡ್ಡೆಯಲ್ಲಿರುವ ತಾಯಿ ಮನೆಗೆ ಶಾಂತಾ ಬಂದಿದ್ದಾಗ ಘಟನೆ ಸಂಭವಿಸಿದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ, ಕೈ ಮೇಲಿದೆ ರಾಜಾಹುಲಿ, ವಿಷ್ಣುದಾದ ಹಚ್ಚೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200