| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIMOGA, 22 AUGUST 2024 | ಮೆಗ್ಗಾನ್ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ತೆರಳಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ ಎಟಿಎಂ ಕಾರ್ಡ್ ಕಳ್ಳತನ ಮಾಡಿ, ಹಣ ಡ್ರಾ ಮಾಡಿಕೊಳ್ಳಲಾಗಿದೆ. ಈ ಸಂಬಂಧ ತಡವಾಗಿ ಪ್ರಕರಣ ದಾಖಲಾಗಿದೆ.
ಸೊರಬ ತಾಲೂಕು ಬಿಲವಾನಿಯ ಗೌರಮ್ಮ ಎಂಬುವವರ ಎಟಿಎಂ ಕಳ್ಳತನ ಮಾಡಿ 50 ಸಾವಿರ ರೂ. ಹಣ ಡ್ರಾ ಮಾಡಿಕೊಳ್ಳಲಾಗಿದೆ.
ಮೊಬೈಲ್ಗೆ ಬಂತು ಮೆಸೇಜ್
ಅನಾರೋಗ್ಯದ ಹಿನ್ನೆಲೆ ಗೌರಮ್ಮ ತಮ್ಮ ಪತಿಯೊಂದಿಗೆ ಜುಲೈ 25ರಂದು ಮೆಗ್ಗಾನ್ ಆಸ್ಪತ್ರೆ ಚಿಕಿತ್ಸೆಗೆ ಬಂದಿದ್ದರು. ಬೆಳಗ್ಗೆ 11 ಗಂಟೆಗೆ ಲ್ಯಾಬ್ನಲ್ಲಿ ರಕ್ತದ ಪರೀಕ್ಷೆ ಮಾಡಿಸಿಕೊಂಡಿದ್ದರು. ಮಧ್ಯಾಹ್ನ 1.30ರ ಹೊತ್ತಿಗೆ ಗೌರಮ್ಮ ಅವರ ಮೊಬೈಲ್ಗೆ ಬ್ಯಾಂಕ್ ಖಾತೆಯಿಂದ 10 ಸಾವಿರ ರೂ. ಹಣ ಕಡಿತವಾದ ಮೆಸೇಜ್ ಬಂದಿತ್ತು. ಸ್ವಲ್ಪ ಹೊತ್ತಿಗೆ ಒಟ್ಟು 50 ಸಾವಿರ ರೂ. ಕಡಿತವಾಗಿರುವ ಮೆಸೇಜ್ ಬಂದಿತ್ತು ಎಂದು ಆರೋಪಿಸಲಾಗಿದೆ.
![]()
ಇದನ್ನೂ ಓದಿ ⇒ ಆಯನೂರಿನಲ್ಲಿ ಬೇಕರಿಗೆ ಬೆಂಕಿ, ಸಿಲಿಂಡರ್ಗಳು ಸ್ಪೋಟ, ಧಗಧಗ ಹೊತ್ತಿ ಉರಿದ ಅಂಗಡಿ
ಕಳ್ಳರಿಗೆ ಪಾಸ್ವರ್ಡ್ ಸಿಕ್ಕಿದ್ದು ಹೇಗೆ?
ಲ್ಯಾಬ್ ಬಳಿ ಸರತಿಯಲ್ಲಿ ನಿಂತಿದ್ದಾಗ ಗೌರಮ್ಮ ಅವರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಎಟಿಎಂ ಕಾರ್ಡ್ ಕಳವು ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಎಟಿಎಂ ಕಾರ್ಡ್ ಮೇಲೆಯೇ ಪಾಸ್ವರ್ಡ್ ಬರೆದಿದ್ದರಿಂದ ಕಳ್ಳರು ಸುಲಭವಾಗಿ ಹಣ ಡ್ರಾ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ 15 ದಿನದಲ್ಲಿ 54 ಲಕ್ಷ ರೂ. ಕಳೆದುಕೊಂಡ ಸರ್ಕಾರಿ ನೌಕರ, ಮುಂದಿನ ಟಾರ್ಗೆಟ್ ನೀವೆ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()