SHIVAMOGGA LIVE NEWS | 5 FEBRUARY 2024
SHIMOGA : ಕೆಎಸ್ಆರ್ಟಿಸಿ ಬಸ್ಸಿನಲ್ಲಿ ತರೀಕೆರೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ನಾಪತ್ತೆಯಾಗಿದೆ. ತರೀಕೆರೆ ತಾಲೂಕಿನ ಜಯಮ್ಮ ಅವರ ಚಿನ್ನದ ಸರ ಕಳ್ಳತನವಾಗಿದೆ. ಸಂಬಂಧಿಯೊಬ್ಬರು ಅಪಘಾತಕ್ಕೀಡಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ವಿಚಾರಿಸಿ ಜಯಮ್ಮ, ಶಿವಮೊಗ್ಗದಿಂದ ತರೀಕೆರೆಗೆ ಮರಳುತ್ತಿದ್ದರು.
ಕೆಎಸ್ಆರ್ಟಿಸಿ ಬಸ್ಸಿನಲ್ಲಿ ತೆರಳುವಾಗ ಶಿವಮೊಗ್ಗ – ಭದ್ರಾವತಿ ಮಾರ್ಗ ಮಧ್ಯೆ ಕೊರಳಲ್ಲಿದ್ದ 2 ಲಕ್ಷ ರೂ. ಮೌಲ್ಯದ ಬಂಗಾರದ ಸರ ನಾಪತ್ತೆ ಆಗಿರುವುದು ಗೊತ್ತಾಗಿದೆ. ಸೀಟಿನ ಅಡಿ ಬಿದ್ದಿರಬಹುದು ಎಂದು ಜಯಮ್ಮ ಬಸ್ಸಿನಲ್ಲಿ ಹುಡಕಿದ್ದಾರೆ. ಮನೆಗೆ ಹೋಗಿ ತಾವು ಧರಿಸಿದ್ದ ಬಟ್ಟೆ, ಕೈಲಿದ್ದ ಬ್ಯಾಗ್ ಕೂಡ ಪರಿಶೀಲಿಸಿದ್ದಾರೆ. ಬಂಗಾರದ ಸರ ಪತ್ತೆಯಾಗದ ಹಿನ್ನೆಲೆ ದೂರು ನೀಡಿದ್ದಾರೆ.
ಕೆಎಸ್ಆರ್ಟಿಸಿ ಬಸ್ಸಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ತಮ್ಮ ಬಂಗಾರದ ಸರ ಕಳ್ಳತನ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಮೊಬೈಲ್ನಲ್ಲಿ ಮಾತನಾಡುತ್ತ ಬಸ್ ಓಡಿಸಿದ ಚಾಲಕ, ವಿಡಿಯೋ ತೆಗೆದು ಪೊಲೀಸರಿಗೆ ಕಳುಹಿಸಿದ ಪ್ರಯಾಣಿಕ, ಮುಂದೇನಾಯ್ತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200