ಶಿಕಾರಿಪುರ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ (Mishap) ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರ – ಶಿರಾಳಕೊಪ್ಪ ರಸ್ತೆಯ ಕುಮದ್ವತಿ ನದಿ ಸೇತುವೆ ಮೇಲೆ ಇಂದು ಅಪಘಾತ ಸಂಭವಿಸಿದೆ.
ಚನ್ನಗಿರಿ ತಾಲೂಕು ಕಾಕನೂರು ಗ್ರಾಮದ ರೂಪ (40) ಮೃತರು. ಕಾರಿನಲ್ಲಿದ್ದ ರೂಪ ಅವರ ಪತಿ ಕಾಂತರಾಜ್, ಸಹೋದರಿ ರೇಖಾ ಗಂಭೀರ ಗಾಯಗೊಂಡಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಕಾಳಿಯಪ್ಪನ್, ಸೋಮಶೇಖರ್, ಸುರೇಶ್ ಕುಮಾರ್ ಹಾಗೂ ಯಮುನಪ್ಪ ಎಂಬುವವರಿಗು ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯಲ್ಲಿ (Mishap) ಎರಡು ಕಾರುಗಳ ಮುಂಭಾಗ ನಜ್ಜುಗುಜ್ಜಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ » ಡಾಕ್ಟರ್ಗೆ ಆಸೆ ಮೂಡಿಸಿತು ಫೇಸ್ಬುಕ್ ಪೋಸ್ಟ್, ನಂಬಿ ಕ್ಲಿಕ್ ಮಾಡಿದ್ಮೇಲೆ ಕಾದಿತ್ತು ಬಿಗ್ ಶಾಕ್, ಕೋಟಿ ಕೋಟಿ ಮೋಸ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200