SHIVAMOGGA LIVE NEWS | 14 MAY 2024
SHIMOGA : ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆ.
ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ಮನೆ ಕಟ್ಟಿದ್ದರು. ಬ್ಯಾಂಕ್ ಸಾಲ ಸಾಲದಾಗದೆ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ ಸಾಲ ಪಡೆದಿದ್ದರು. ಈಚೆಗೆ ರಂಗನಾಥ್ ನಡೆಸುತ್ತಿದ್ದ ಪಾನಿಪೂರಿ ವ್ಯಾಪಾರ ಕುಂಟಿತವಾಗಿತ್ತು. ಇದರಿಂದ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಈ ವೇಳೆ ಬಡ್ಡಿಗೆ ಸಾಲ ಕೊಟ್ಟವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರು. ಮನನೊಂದಿದ್ದ ಶೋಭಾ ಅವರು ಶನಿವಾರ ರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ರಂಗನಾಥ್ ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳಿದಾಗ ಶೋಭಾ ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ. ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಶೋಭಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಯುವಕನ ಕೊಲೆ, ಘಟನೆ ಕುರಿತು ಎಸ್.ಪಿ ಹೇಳಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200