SHIVAMOGGA LIVE NEWS | 25 NOVEMBER 2023
SHIMOGA : ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳದಲ್ಲಿ ಗುಂಡಿಗೆ ಬಿದ್ದ ಕಾರ್ಮಿಕನ ಮೇಲೆ ಮಣ್ಣು ಕುಸಿದು ಸಾವನ್ನಪ್ಪಿದ್ದಾನೆ. ಮಂಡೇನಕೊಪ್ಪದ ಸತೀಶ್ ನಾಯ್ಕ್ (27) ಮೃತರು.
ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳದಲ್ಲಿ ಪೈಪ್ಲೈನ್ ಜೋಡಣೆ ಕಾರ್ಯಕ್ಕೆ ಜೆಸಿಬಿಯಿಂದ ಗುಂಡಿ ತೆಗೆಯಲಾಗಿತ್ತು. ಕಾಲು ಜಾರಿ ಸತೀಶ್ ಗುಂಡಿಗೆ ಬಿದ್ದಿದ್ದು ಕೂಡಲೆ ಮಣ್ಣು ಕುಸಿದಿದೆ. ಉಸಿರುಗಟ್ಟಿ ಸತೀಶ್ ಮೃತಪಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜೆಸಿಬಿ ಮೂಲಕ ಮಣ್ಣು ತೆಗೆದು ಸತೀಶ್ನ ರಕ್ಷಣೆ ಯತ್ನಿಸಲಾಗಿದೆ. ಆ ವೇಳೆಗಾಗಲೆ ಆತ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ದೀವರ ಸಾಂಸ್ಕೃತಿಕ ವೈಭವ, ಸಿಗಂದೂರು ಧರ್ಮದರ್ಶಿ ಸೇರಿ ಪ್ರಮುಖರಿಗೆ ಪ್ರಶಸ್ತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200