SHIVAMOGGA LIVE NEWS | 9 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಗ್ಯಾಂಗ್ ವಾರ್ನಲ್ಲಿ ಗಂಭೀರ ಗಾಯಗೊಂಡಿದ್ದ ರೌಡಿ ಶೀಟರ್ ಯಾಸಿನ್ ಖುರೇಷಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಲಷ್ಕರ್ ಮೊಹಲ್ಲಾದಲ್ಲಿ ನಿನ್ನೆ ನಡೆದ ದಾಳಿ ವೇಳೆ ಯಾಸಿನ್ ಖುರೇಷಿ ಗಂಭೀರ ಗಾಯಗೊಂಡಿದ್ದ.
ಯಾಸಿನ್ ಖುರೇಷಿ ಮೇಲೆ ಆದಿಲ್ ಮತ್ತು ಆತನ ಸಹಚರರು ದಾಳಿ ನಡೆಸಿದ್ದರು. ಗಂಭೀರ ಗಾಯಗೊಂಡಿದ್ದ ಆತನನ್ನು ಶಿವಮೊಗ್ಗದ ಎನ್.ಹೆಚ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಯಾಸಿನ್ ಖುರೇಷಿ ಇವತ್ತು ಸಂಜೆ ಸಾವನ್ನಪ್ಪಿದ್ದಾನೆ.
ಬುಧವಾರ ಸಂಜೆ ಆದಿಲ್ ಮತ್ತು ಆತನ ಸಹಚರರು ಲಷ್ಕರ್ ಮೊಹಲ್ಲಾದಲ್ಲಿ ಯಾಸಿನ್ ಖುರೇಷಿ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಯಾಸಿನ್ನ ಸಹಚರರು ಆದಿಲ್ ಸಹಚರರಾದ ಸೊಹೇಲ್ ಅಲಿಯಾಸ್ ಸೇಬು (32) ಮತ್ತು ಗೌಸ್ (30) ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಚಪ್ಪಡಿ ಕಲ್ಲುಗಳನ್ನು ಎತ್ತಿ ಹಾಕಿ ಹತ್ಯೆ ಮಾಡಿದ್ದರು. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದ ವಿವಿಧೆಡೆ ಗುಡುಗು ಸಹಿತ ಜೋರು ಮಳೆ, ಸಿಟಿಯಲ್ಲಿ ಕವಿದ ಮೋಡ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






