ಸ್ಮಶಾನದ ಬಳಿ ಅನುಮಾನಾಸ್ಪದ ವರ್ತನೆ, ಯುವಕನಿಗೆ ಮೆಡಿಕಲ್ ಟೆಸ್ಟ್, ಅರೆಸ್ಟ್

 ಶಿವಮೊಗ್ಗ  LIVE 

SHIVAMOGGA LIVE NEWS | 8 ಮಾರ್ಚ್ 2022

ಸ್ಮಾಶನವೊಂದರ ಬಳಿ ಅನಮಾನಾಸ್ಪದವಾಗಿ ವರ್ತಿಸುತ್ತ ಕುಳಿತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ..

Sigandur-Janthre-2026-scaled.

Shimoga Nanjappa Hospital

ಅಣ್ಣಾನಗರದ ಉಮೇಶ ಅಲಿಯಾಸ್ ದಸ್ಕ (23) ಬಂಧಿತ. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಶರಾವತಿ ನಗರ ಸ್ಮಶಾನದ ಬಳಿ ಉಮೇಶ ಅನುಮಾನಾಸ್ಪವಾಗಿ ವರ್ತಿಸುತ್ತ ಕುಳಿತಿದ್ದ. ಆತನನ್ನು ಕರೆದು ವಿಚಾರಣೆ ಮಾಡಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಯುವಕ ಅರೆಸ್ಟ್

ಉಮೇಶನನ್ನು ಕರೆದೊಯ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಆತನನ್ನು ಬಂಧಿಸಿ ಪ್ರಕರಣ ದಾಖಲು ಮಾಡಲಾಗಿದೆ.

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment