ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ನವೆಂಬರ್ 2021
ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನು ಕಂಡು ಬೈಕ್ ಬಿಟ್ಟು ಇಬ್ಬರು ಯುವಕರು ಪರಾರಿಯಾಗಿದ್ದಾರೆ. ಈ ಪೈಕಿ ಒಬ್ಬನನ್ನು ಹಿಡಿದು ಪರಿಶೀಲನೆ ನಡೆಸಿದಾಗ, ಆತನ ಬಳಿ ಹರಿತವಾದ ಚಾಕು ಪತ್ತೆಯಾಗಿದೆ.
ಉಷಾ ನರ್ಸಿಂಗ್ ಹೋಂ ಸರ್ಕಲ್’ನಲ್ಲಿ ಜಯನಗರ ಠಾಣೆ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ನಂಬರ್ ಇಲ್ಲದೆ ಇರುವ ಬೈಕಿನಲ್ಲಿ ಬಂದ ಇಬ್ಬರು ಯುವಕರನ್ನು ತಡೆದು, ಪರಿಶೀಲನೆ ಆರಂಭಿಸಿದ್ದಾರೆ. ಈ ವೇಳೆ ಇಬ್ಬರು ಬೈಕ್ ಬಿಟ್ಟು ಓಡಲು ಯತ್ನಿಸಿದ್ದಾರೆ.
ಬೆನ್ನಟ್ಟಿದ ಪೊಲೀಸರು ಸಚಿನ್ ಎಂಬಾತನನ್ನು ಹಿಡಿದುಕೊಂಡಿದ್ದಾರೆ. ಪರಿಶೀಲನೆ ನಡೆಸಿದಾಗ ಆತನ ಬಳಿ ಚಾಕು ಪತ್ತೆಯಾಗಿದೆ. ಅಶ್ವಲ್ ಎಂಬಾತ ಎಸ್ಕೇಪ್ ಆಗಿದ್ದಾನೆ.
ಪಿಎಸ್ಐ ರಾಹತ್ ಅಲಿ, ಸಿಬ್ಬಂದಿಗಳಾದ ಶಿವರಾಜ್ ನಾಯಕ್, ಆದರ್ಶ ಅವರು ವಾಹನ ತಪಾಸಣೆ ನಡೆಸುತ್ತಿದ್ದಾಗ ಘಟನೆ ಸಂಭವಿಸಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
(ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ ಸಂಭವಿಸಬಹುದಾದ ಅಪಾಯ ತಪ್ಪಲಿದೆ. ಇಲ್ಲಿದೆ ತಜ್ಞ ವೈದ್ಯರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200