SHIVAMOGGA LIVE NEWS | 1 MARCH 2023
SHIMOGA : ಯುವಕರ ಗುಂಪೊಂದು ಅಂಗಡಿಯೊಂದಕ್ಕೆ (Shop) ನುಗ್ಗಿ ಮುಚ್ಚಿನಿಂದ ಹೊಡೆದು ವಸ್ತುಗಳನ್ನು ಹಾನಿ ಮಾಡಿದೆ. ಸಮೀಪದಲ್ಲೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಹಾಕಿದೆ. ಅಲ್ಲದೆ ದಾರಿಯಲ್ಲಿ ಬರುತ್ತಿದ್ದ ಯುವಕನೊಬ್ಬನ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಬುದ್ಧಾನಗರದ 3ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಈ ರಸ್ತೆಯಲ್ಲಿರುವ ಗಂಗಾಧರ್ ಎಂಬುವವರ ಅಂಗಡಿಗೆ (Shop) ನುಗ್ಗಿದ ಮೂವರು ಯುಕವರು ದಾಂಧಲೆ ನಡೆಸಿದ್ದಾರೆ. ಕೈಯಲ್ಲಿ ಮಚ್ಚು ಹಿಡಿದು ಬಂದಿದ್ದ ಯುವಕರು ಅಂಗಡಿಯಲ್ಲಿದ್ದ ವಸ್ತುಗಳ ಮೇಲೆ ದಾಳಿ ನಡೆಸಿ, ಚಲ್ಲಾಪಿಲ್ಲಿಗೊಳಿಸಿದ್ದಾರೆ. ಗಂಗಾಧರ್ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಅಂಗಡಿ ಪಕ್ಕದಲ್ಲಿಯೇ ನಿಲ್ಲಿಸಿದ್ದ ಕಿಯಾ ಕಾರಿನ ಹಿಂಬದಿ ಗಾಜನ್ನು ಒಡೆದು ಹಾಕಿದ್ದಾರೆ. ಬಳಿಕ ರಸ್ತೆಯಲ್ಲಿ ಜೋರಾಗಿ ಕೂಗಿಕೊಂಡು ಹೋಗುತ್ತಿದ್ದು, ಎದುರಿನಿಂದ ಬರುತ್ತಿದ್ದ ಸೈಯದ್ ಮೊಹಿದ್ದೀನ್ ಎಂಬ ಯುವಕನ ಮೇಲೆ ದಾಳಿ ನಡೆಸಿದ್ದಾರೆ. ಆತ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ – ಕಾಲೇಜು ಲೆಕ್ಚರರ್ಗೆ ರಸ್ತೆಯಲ್ಲಿ ಚಾಕು ತೋರಿಸಿ ಬೆದರಿಕೆ, ದರೋಡೆ
ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



