SHIVAMOGGA LIVE | 29 JULY 2023
SHIMOGA : ವಿದ್ಯುತ್ ತಂತಿ ತಗುಲಿ (Shock) ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಳೆದ ರಾತ್ರಿ ಘಟನೆ ಬೆಳಕಿಗೆ ಬಂದಿದೆ.
ಗಿರೀಶ (33) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್ ಕಂಬದ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದ ಹಿನ್ನೆಲೆ ಹುಡುಕಾಟ ನಡೆಸಿದ್ದಾರೆ. ಆಗ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – GOOD NEWS | ಬೆಂಗಳೂರು – ಶಿವಮೊಗ್ಗ ವಿಮಾನದ ಟಿಕೆಟ್ ರೇಟ್ ಇಳಿಕೆ, ಈವರೆಗೂ ಎಷ್ಟಾಗಿದೆ ಬುಕಿಂಗ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200