ಶಿವಮೊಗ್ಗ ಲೈವ್.ಕಾಂ | SORABA NEWS | 25 JUNE 2021➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.
ಎತ್ತುಗಳಿಗೆ ನೀರು ಕುಡಿಸಲು ಹೋದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ತಾಲ್ಲೂಕಿನ ಭದ್ರಾಪುರ ಸಮೀಪದ ವರದಾ ನದಿಯಲ್ಲಿ ನಡೆದಿದೆ.
ಭದ್ರಾಪುರ ಗ್ರಾಮದ ನಿವಾಸಿ ಮಹೇಶ ಈರಪ್ಪ ದೊಡ್ಡ ಕುಂಬಾರ ಮನೆ ( 24) ಮೃತ ದುರ್ದೈವಿ. ಈತ ವರದಾ ನದಿಗೆ ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಆಕಸ್ಮಿಕವಾಗಿ ಜಾರಿ ನದಿಗೆ ಬಿದ್ದಿದ್ದಾನೆ.
ಅಗ್ನಿ ಶಾಮಕ ದಳದ ಸಿಬ್ಬಂದಿ ಸತತ ಪ್ರಯತ್ನದಿಂದ ಇವತ್ತು ಮೃತ ಯುವಕನ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್ನ ನಮ್ಮೂರ ನ್ಯೂಸ್ – ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭಗಳು ಸೇರಿದಂತೆ ಸುದ್ದಿಯಾಗುವ ಸಂಗತಿಗಳಿದ್ದರೆ ವಾಟ್ಸಪ್ ಮಾಡಿ. ನಿಮ್ಮೂರ ಸುದ್ದಿ ಜಿಲ್ಲೆಯ ಜನಕ್ಕೆ ತಲುಪಲಿ)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com