ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 MAY 2024
ANANDAPURA : ಲಾಂಗ್ ಹಿಡಿದುಕೊಂಡು ಹೆದ್ದಾರಿಯಲ್ಲಿ ಓಡಾಡಿ ಆತಂಕ ಮೂಡಿಸಿದ್ದ ಯುವಕನಿಗೆ (Youth) ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾಗರ ತಾಲೂಕು ಆನಂದಪುರದಲ್ಲಿ ಘಟನೆ ಸಂಭವಿಸಿದೆ. ಸದ್ಯ ಇದರ ವಿಡಿಯೋ ವೈರಲ್ ಆಗಿದೆ.
ಯುವಕನೊಬ್ಬ ಲಾಂಗ್ ಹಿಡಿದು ನಡೆದು ಹೋಗುತ್ತಿರುವುದನ್ನು ಕಾರಿನಲ್ಲಿದ್ದವರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಲಾಂಗ್ ಹಿಡಿದು ತೆರಳುತ್ತಿದ್ದವನನ್ನು ಸ್ಥಳೀಯರು ತಡೆದಿದ್ದಾರೆ. ಈ ವೇಳೆ ‘ನನ್ನ ತಮ್ಮನಿಗೆ ಆಕ್ಸಿಡೆಂಟ್ ಅಗಿದೆʼ ಎಂದು ಆತ ಕೂಗಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಆತನ ಕೈಯಲ್ಲಿದ್ದ ಲಾಂಗ್ ಕಸಿದ ಸ್ಥಳೀಯರು ರಸ್ತೆಯ ಪಕ್ಕದ ಕೆರೆಗೆ ಎಸೆದಿದ್ದಾರೆ. ಬಳಿಕ ಯುವಕನಿಗೆ ಧರ್ಮದೇಟು ನೀಡಿದ್ದಾರೆ.
ಆ ಯುವಕನನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಆನಂದಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವಕ ಲಾಂಗ್ ಬೀಸುತ್ತ ಓಡಾಡಿದ್ದರಿಂದ ಆನಂದಪುರದಲ್ಲಿ ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು.
ಇದನ್ನೂ ಓದಿ – ಪ್ರಚಾರ ಬಿರುಸುಗೊಳಿಸಿದ ಬಿಜೆಪಿ, ಡಾ. ಧನಂಜಯ ಸರ್ಜಿ ಪರ ಅಖಾಡಕ್ಕಿಳಿದ ಪತ್ನಿ, ಎಲ್ಲೆಲ್ಲಿ ಹೇಗಿದೆ ಕ್ಯಾಂಪೇನ್?
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















