ವಿಷ ಕುಡಿದು ಯುವಕ ಸಾವು ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್, 5 ತಿಂಗಳ ಬಳಿಕ ಬಯಲಾಯ್ತು ರಹಸ್ಯ, ಮನೆಯಲ್ಲೇ ಇದ್ದ ಹಂತಕ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದಕ್ಕೆ ಐದು ತಿಂಗಳ ಬಳಿಕ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಸಂಬಂಧ ಮೃತ ಯುವಕನ ಅಣ್ಣನನ್ನೇ ಪೊಲೀಸರು ಬಂಧಿಸಿದ್ದಾರೆ.

ಸಾಗರ ತಾಲೂಕು ಅಂದಾಸುರ ಗ್ರಾಮದ ಹರೀಶ್ (29) ವಿಷ ಸೇವಿಸಿ ಮೃತಪಟ್ಟಿದ್ದ ಎಂದು ಹೇಳಲಾಗಿತ್ತು. ಆದರೆ ಸಾವಿನ ಕುರಿತು ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಅಣ್ಣನಿಂದಲೇ ತಮ್ಮ ಹತ್ಯೆಯಾಗಿರುವುದು ತಿಳಿದು ಬಂದಿದೆ.

ಏನಿದು ಪ್ರಕರಣ? ಹೇಗಾಯ್ತು ಘಟನೆ?

ಮೇ 8ರ ರಾತ್ರಿ ಹರೀಶನ ಮನೆಯಲ್ಲಿ ಗಲಾಟೆಯಾಗಿದೆ. ಮನನೊಂದು ಹರೀಶ, ಭತ್ತದ ಬೆಳೆಗೆ ಬಳಸುವ ಔಷಧವನ್ನು ಸೇವಿಸಿದ್ದ. ತೀವ್ರ ಅಸ್ವಸ್ಥಗೊಂಡ ಹರೀಶನನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಹರೀಶ ಕೊನೆಯುಸಿರೆಳೆದಿದ್ದ.

LifeSpring%2BKan%2B02

ಅನುಮಾನಗೊಂಡ ಪೋಷಕರಿಂದ ದೂರು

ಹರೀಶನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಆತನ ತಂದೆ, ಸಾಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರಿಗೆ ಮರಣೋತ್ತರ ಪರೀಕ್ಷೆಯಿಂದ ಇದು ಆತ್ಮಹತ್ಯೆಯಲ್ಲ, ಕೊಲೆ ಅನ್ನುವುದು ಸ್ಪಷ್ಟವಾಗಿತ್ತು. ಹರೀಶನ ತಲೆಗೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿರುವುದು ಖಚಿತವಾಗಿತ್ತು.

SHIVAMOGGA LIVE CONTATCT

ಅಣ್ಣನ ಮೇಲೆ ಅನುಮಾನ

ತನಿಖೆ ವೇಳೆ ಹರೀಶನ ಅಣ್ಣನನ್ನು ವಿಚಾರಣೆಗೆ ಒಳಪಡಿಸಲಾಯಿತು. ಈ ವೇಳೆ ಹರೀಶನ ಕೊಲೆ ಮಾಡಿರುವುದನ್ನು ಅಣ್ಣ ಒಪ್ಪಿಕೊಂಡಿದ್ದಾನೆ. ಮೇ 8ರಂದು ರಾತ್ರಿ ಹರೀಶ ವಿಷ ಸೇವಿಸಿರುತ್ತಾನೆ. ಈ ವೇಳೆ ಹರೀಶನ ಅಣ್ಣ ಮನೆಯ ಮುಂದಿದ್ದ ಕಬ್ಬಿಣ ರಾಡ್ ಒಂದರಿಂದ, ಹರೀಶನ ತಲೆಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದ. ಅಷ್ಟರಲ್ಲಾಗಲೆ ಊರಿನ ಜನ ಸೇರಿದ್ದರಿಂದ ಹರೀಶ ವಿಷ ಸೇವಿಸಿದ್ದಾನೆ ಎಂದು ಹಬ್ಬಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

1632381449326627 1

ತಮ್ಮನ ಹತ್ಯೆಗೆ ಅಣ್ಣ ಯೋಚಿಸಿದ್ದೇಕೆ?

ಹರೀಶನನ್ನು ಅಣ್ಣನೆ ಹತ್ಯೆಗೈದಿರುವ ವಿಚಾರ ಸ್ಪಷ್ಟವಾಗುತ್ತಿದ್ದಂತೆ, ಕಾರಣ ವಿಚಾರಿಸಿದ್ದಾರೆ. ತಂದೆಯ ಆಸ್ತಿಯಲ್ಲ ತನ್ನ ಪಾಲಿಗೆ ಬರುತ್ತದೆ ಎಂಬ ದುರುದ್ದೇಶದಿಂದ ಹರೀಶನ ಅಣ್ಣನೆ, ಹರೀಶನ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ. ಹರೀಶ ಮೃತಪಟ್ಟು ಐದು ತಿಂಗಳ ಬಳಿಕ ತನಿಖೆ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ.

Sagara Rural Police Station 1

ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಹರೀಶನ ಅಣ್ಣನನ್ನು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment