SHIVAMOGGA LIVE NEWS | 13 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಆಸ್ತಿ ವಿವಾದ ಸಂಬಂಧ ಯುವಕೊಬ್ಬನ ಹತ್ಯೆ ಮಾಡಲಾಗಿದೆ. ಘಟನೆ ಹಿನ್ನೆಲೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಶಿವಮೊಗ್ಗ ತಾಲೂಕು ದುಮ್ಮಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಸತೀಶ್ ನಾಯ್ಕ (28) ಎಂಬಾತನ ಹತ್ಯೆ ಮಾಡಲಾಗಿದೆ. ಸತೀಶ್ ನಾಯ್ಕ ಮತ್ತು ಅಖಿಲೇಶ್ ನಾಯ್ಕ ಮಧ್ಯೆ ಜಮೀನು ವಿಚಾರವಾಗಿ ವಿವಾದವಿತ್ತು. ಇದೇ ಕಾರಣಕ್ಕೆ ಇವತ್ತು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಘಟನೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ‘ಸತೀಶ್ ನಾಯ್ಕ ಮತ್ತು ಅಖಿಲೇಶ್ ನಾಯ್ಕ ಇಬ್ಬರದ್ದು ಅಕ್ಕಪಕ್ಕದ ಜಮೀನು. ಇವತ್ತು ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಅಖಿಲೇಶ ನಾಯ್ಕ ಮತ್ತು ಆತನ ಸಹಚರರು ಸತೀಶ್ ನಾಯ್ಕನ ಮೇಲೆ ಕುಡುಗೋಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಅಖಿಲೇಶ್ ನಾಯ್ಕನನ್ನು ಬಂಧಿಸಲಾಗಿದೆ. ಇನ್ನು ಯಾರೆಲ್ಲ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಆರೋಪಿ ಮನೆ ಮೇಲೆ ಕಲ್ಲು
ಇನ್ನು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಆರೋಪಿ ಅಖಿಲೇಶ್ ನಾಯ್ಕ ಮನೆ ಮೇಲೆ ಕಲ್ಲು ತೂರಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದುಮ್ಮಳ್ಳಿ ಗ್ರಾಮದಲ್ಲಿ ಸದ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋಗೆ ಕ್ಯಾಂಟರ್ ಡಿಕ್ಕಿ, ತಾಯಿ, ಅಜ್ಜಿ ಕಣ್ಮುಂದೆಯೇ ವಿದ್ಯಾರ್ಥಿನಿ ಸಾವು
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






