SHIVAMOGGA LIVE NEWS | 13 MAY 2024
SHIMOGA : ಆಸ್ತಿ ವಿವಾದ ಸಂಬಂಧ ಯುವಕೊಬ್ಬನ ಹತ್ಯೆ ಮಾಡಲಾಗಿದೆ. ಘಟನೆ ಹಿನ್ನೆಲೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಶಿವಮೊಗ್ಗ ತಾಲೂಕು ದುಮ್ಮಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಸತೀಶ್ ನಾಯ್ಕ (28) ಎಂಬಾತನ ಹತ್ಯೆ ಮಾಡಲಾಗಿದೆ. ಸತೀಶ್ ನಾಯ್ಕ ಮತ್ತು ಅಖಿಲೇಶ್ ನಾಯ್ಕ ಮಧ್ಯೆ ಜಮೀನು ವಿಚಾರವಾಗಿ ವಿವಾದವಿತ್ತು. ಇದೇ ಕಾರಣಕ್ಕೆ ಇವತ್ತು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಘಟನೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ‘ಸತೀಶ್ ನಾಯ್ಕ ಮತ್ತು ಅಖಿಲೇಶ್ ನಾಯ್ಕ ಇಬ್ಬರದ್ದು ಅಕ್ಕಪಕ್ಕದ ಜಮೀನು. ಇವತ್ತು ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಅಖಿಲೇಶ ನಾಯ್ಕ ಮತ್ತು ಆತನ ಸಹಚರರು ಸತೀಶ್ ನಾಯ್ಕನ ಮೇಲೆ ಕುಡುಗೋಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಅಖಿಲೇಶ್ ನಾಯ್ಕನನ್ನು ಬಂಧಿಸಲಾಗಿದೆ. ಇನ್ನು ಯಾರೆಲ್ಲ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.
ಆರೋಪಿ ಮನೆ ಮೇಲೆ ಕಲ್ಲು
ಇನ್ನು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಆರೋಪಿ ಅಖಿಲೇಶ್ ನಾಯ್ಕ ಮನೆ ಮೇಲೆ ಕಲ್ಲು ತೂರಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದುಮ್ಮಳ್ಳಿ ಗ್ರಾಮದಲ್ಲಿ ಸದ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋಗೆ ಕ್ಯಾಂಟರ್ ಡಿಕ್ಕಿ, ತಾಯಿ, ಅಜ್ಜಿ ಕಣ್ಮುಂದೆಯೇ ವಿದ್ಯಾರ್ಥಿನಿ ಸಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200