ಶಿವಮೊಗ್ಗದಲ್ಲಿ ಇವತ್ತು ಯುವಕನ ಕೊಲೆ, ಘಟನೆ ಕುರಿತು ಎಸ್‌.ಪಿ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 MAY 2024

SHIMOGA : ಆಸ್ತಿ ವಿವಾದ ಸಂಬಂಧ ಯುವಕೊಬ್ಬನ ಹತ್ಯೆ ಮಾಡಲಾಗಿದೆ. ಘಟನೆ ಹಿನ್ನೆಲೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಶಿವಮೊಗ್ಗ ತಾಲೂಕು ದುಮ್ಮಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಸತೀಶ್‌ ನಾಯ್ಕ (28) ಎಂಬಾತನ ಹತ್ಯೆ ಮಾಡಲಾಗಿದೆ. ಸತೀಶ್‌ ನಾಯ್ಕ ಮತ್ತು ಅಖಿಲೇಶ್‌ ನಾಯ್ಕ ಮಧ್ಯೆ ಜಮೀನು ವಿಚಾರವಾಗಿ ವಿವಾದವಿತ್ತು. ಇದೇ ಕಾರಣಕ್ಕೆ ಇವತ್ತು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

ಘಟನೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ‘ಸತೀಶ್‌ ನಾಯ್ಕ ಮತ್ತು ಅಖಿಲೇಶ್‌ ನಾಯ್ಕ ಇಬ್ಬರದ್ದು ಅಕ್ಕಪಕ್ಕದ ಜಮೀನು. ಇವತ್ತು ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಅಖಿಲೇಶ ನಾಯ್ಕ ಮತ್ತು ಆತನ ಸಹಚರರು ಸತೀಶ್‌ ನಾಯ್ಕನ ಮೇಲೆ ಕುಡುಗೋಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಅಖಿಲೇಶ್‌ ನಾಯ್ಕನನ್ನು ಬಂಧಿಸಲಾಗಿದೆ. ಇನ್ನು ಯಾರೆಲ್ಲ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

SP Mithun Kumar IPS

ಆರೋಪಿ ಮನೆ ಮೇಲೆ ಕಲ್ಲು

ಇನ್ನು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಆರೋಪಿ ಅಖಿಲೇಶ್‌ ನಾಯ್ಕ ಮನೆ ಮೇಲೆ ಕಲ್ಲು ತೂರಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದುಮ್ಮಳ್ಳಿ ಗ್ರಾಮದಲ್ಲಿ ಸದ್ಯ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

Ambulance at Mc Gann Hospital

ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋಗೆ ಕ್ಯಾಂಟರ್‌ ಡಿಕ್ಕಿ, ತಾಯಿ, ಅಜ್ಜಿ ಕಣ್ಮುಂದೆಯೇ ವಿದ್ಯಾರ್ಥಿನಿ ಸಾವು

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment