ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯ ರಸ್ತೆ ಬದಿಯ (roadside) ಮರವೊಂದರಲ್ಲಿ ಇಂದು ಮಧ್ಯಾಹ್ನ ಯುವಕನೊಬ್ಬನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತನನ್ನು ಹರಮಘಟ್ಟದ ದೇವರಾಜ್ (34) ಎಂದು ಗುರುತಿಸಲಾಗಿದೆ. ರಸ್ತೆ ಪಕ್ಕದ ಮರದಲ್ಲಿ ಯುವಕನ ಮೃತದೇಹ ನೇತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಇದನ್ನೂ ಓದಿ : ಶಿವಮೊಗ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
