Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಿಗಂದೂರು, ಜೋಗ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಸಾಗರದ ಲಾಡ್ಜ್’ನಲ್ಲಿ ನೇಣಿಗೆ ಶರಣು

ಸಿಗಂದೂರು, ಜೋಗ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಸಾಗರದ ಲಾಡ್ಜ್’ನಲ್ಲಿ ನೇಣಿಗೆ ಶರಣು

27/09/2021 10:05 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಜೋಗ, ಸಿಗಂದೂರು, ನೀನಾಸಂ ಪ್ರವಾಸಕ್ಕೆಂದು ಬಂದಿದ್ದ ಯುವಕರಿಬ್ಬರು ಸಾಗರದ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಯುವಕರಿಬ್ಬರು ಕೊಠಡಿ ಪಡೆದುಕೊಂಡಿದ್ದರು. ಸೆಪ್ಟೆಂಬರ್ 24ರಂದು ಯುವಕರು ರೂಂ ಬುಕ್ ಮಾಡಿಕೊಂಡಿದ್ದರು.

ಬಾಗಲಕೋಟೆಯಿಂದ ಬಂದಿದ್ದರು

ಯುವಕರಿಬ್ಬರು ಬಾಗಲಕೋಟೆಯ ಬನಹಟ್ಟಿ ನಗರದವರು. ಇವರನ್ನು ಸಂತೋಷ್ ಅಡವಿನ್ನವರ (23), ಹನುಮಂತ ಅಲಗೂರು (28) ನೇಣಿಗೆ ಶರಣಾದವರು. ಸೆಪ್ಟೆಂಬರ್ 24ರಂದು ಸಾಗರಕ್ಕೆ ಬಂದಿದ್ದ ಇವರು ಲಾಡ್ಜ್ ಬುಕ್ ಮಾಡಿಕೊಂಡಿದ್ದರು. ಮಧ್ಯಾಹ್ನ ಊಟ ಕೊಂಡೊಯ್ದು ರೂಂ ಬಾಗಿಲು ಹಾಕಿಕೊಂಡಿದ್ದರು.

1632381439867456 3

ಬಾಗಿಲು ತಟ್ಟಿದ ರೂಂ ಬಾಯ್

ಶನಿವಾರ ರಾತ್ರಿ ಊಟ ಬೇಕಾ ಎಂದು ವಿಚಾರಿಸಲು ರೂಂ ಬಾಯ್ ಬಾಗಿಲು ತಟ್ಟಿದ್ದ. ಆದರೆ ಒಳಗಿನಿಂದ ಯಾವುದೆ ಪ್ರತಿಕ್ರಿಯೆ ಬರಲಿಲ್ಲ. ಮಲಗಿರಬೇಕು ಎಂದು ಭಾವಿಸಿಕೊಂಡು ರೂಂ ಬಾಯ್ ವಾಪಸ್ ತೆರಳಿದ್ದ. ಭಾನುವಾರ ಬೆಳಗ್ಗೆ ಬಹುಹೊತ್ತು ಯುವಕರು ರೂಂನಿಂದ ಹೊರಗೆ ಬಂದಿರಲಿಲ್ಲ. ಇದು ಲಾಡ್ಜ್ ಸಿಬ್ಬಂದಿ ಅನುಮಾನಕ್ಕೆ ಕಾರಣವಾಗಿತ್ತು.

ನೇಣು ಬಿಗಿದ ಸ್ಥಿತಿಯಲ್ಲಿ

ಈ ಕುರಿತು ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರ ಸಮ್ಮುಖದಲ್ಲಿ ಬಾಗಿಲು ಒಡೆದು ನೋಡಿದಾಗ, ಸಂತೋಷ್ ಮತ್ತು ಹನುಮಂತ ನೇಣಿಗೆ ಶರಣಾಗಿದ್ದರು. ರೂಂನದಲ್ಲಿದ್ದ ಸೀಲಿಂಗ್’ಗೆ ಇಬ್ಬರು ಪ್ರತ್ಯೇಕವಾಗಿ ನೇಣು ಬಿಗಿದುಕೊಂಡಿದ್ದರು. ಶನಿವಾರ ರಾತ್ರಿಯೇ ಘಟನೆ ಸಂಭವಿಸಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ.

ADVT JULY NANJAPPA HOSPITAL HOME LAB TESTING

ಕರೋನ ಮತ್ತು ಲಾಕ್ ಡೌನ್ ಕಾರಣವಾ?

ಸಂತೋಷ್ ಮತ್ತು ಹನುಮಂತ ಅವರು ಸ್ನೇಹಿತರು. ಬೆಂಗಳೂರಿನಲ್ಲಿ ಹವಾನಿಯಂತ್ರಿತ ಹೊಸ ಮತ್ತು ಹಳೆಯ ಯಂತ್ರಗಳ ರಿಪೇರಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕರೋನ ಲಾಕ್ ಡೌನ್’ನಲ್ಲಿ ಕೆಲಸ ಕಳೆದುಕೊಂಡು ಊರಿಗೆ ಮರಳಿದ್ದರು. ಈ ನಡುವೆ ಜೋಗ, ಸಿಗಂದೂರು, ನೀನಾಸಂ ಪ್ರವಾಸಕ್ಕೆ ತೆರಳುವುದಾಗಿ ಮನೆಯಲ್ಲಿ ತಿಳಿಸಿದ್ದರು. ಬಸ್ ಟಿಕೆಟ್’ಗಳು ಕೂಡ ಇದನ್ನು ಸಾಬೀತು ಪಡಿಸಿವೆ. ಈ ಕುರಿತು ಅವರ ಕುಟುಂಬದವರು ಕೂಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

0001

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 270921 Farmers Protest and Bike rally at Shimoga city ಬಂದ್ ಬೆಂಬಲಿಸುವಂತೆ ಮನವಿ, ಶಿವಮೊಗ್ಗ ನಗರದಾದ್ಯಂತ ಬೈಕ್ ಜಾಥಾ
Next Article 240721 Bypass Road No Rain 1 ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಬೈಕ್ ಡಿಕ್ಕಿ, ಜಾವಳ್ಳಿ ಅರಬಿಂದೋ ಶಾಲೆ ಶಿಕ್ಷಕ ಸಾವು

ಇದನ್ನೂ ಓದಿ

Siganduru-Bridge-in-sagara-taluk
SAGARA

ಸಿಗಂದೂರು ಸೇತುವೆ ಬಳಿ ಗೇಟ್‌ ಸಿಬ್ಬಂದಿಗೆ ಮಚ್ಚು ತೋರಿಸಿದ ಧಾರವಾಡದ ಪ್ರವಾಸಿಗ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Online-Fraud-Case-image
CRIME DIARYSHIVAMOGGA CITY

ವಾಟ್ಸಪ್‌ ಗ್ರೂಪ್‌ ಅಡ್ಮಿನ್‌ಗೆ ಮೆಸೇಜ್‌ ಮಾಡಿದ್ದ ಟೀಚರ್‌ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
crime name image
CRIME DIARYSHIVAMOGGA CITY

ಸೋಮಿನಕೊಪ್ಪ ಫ್ಲೈ ಓವರ್‌ ಕೆಳಗೆ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ ಮೇಲೆ ಅಟ್ಯಾಕ್‌, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Crime-News-General-Image
CRIME DIARYSHIVAMOGGA CITY

ಸಾಲದ ಕಂತು ಕಟ್ಟದ ಗ್ರಾಹಕನನ್ನು ಸಂಪರ್ಕಿಸಿದ ಬಜಾಜ್‌ ಫೈನಾನ್ಸ್‌ ಸಿಬ್ಬಂದಿಗೆ ಕಾದಿತ್ತು ಶಾಕ್‌, ದಾಖಲಾಯ್ತು ಕೇಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
crime name image
CRIME DIARYSHIVAMOGGA CITY

ಅಡಿಕೆ ಹಾಳೆ ವಿಚಾರವಾಗಿ ಮನೆಗೆ ನುಗ್ಗಿ ಗಲಾಟೆ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/06/2025
Police-Van-Jeep-at-Shimoga-Nehru-Road
CRIME DIARYSHIVAMOGGA

ಶಿವಮೊಗ್ಗದ ನಿರ್ಜನ ಪ್ರದೇಶದಲ್ಲಿ ಬೆಂಗಳೂರಿನ ವ್ಯಕ್ತಿಗೆ ಚಿನ್ನದ ನಾಣ್ಯ ಕೊಟ್ಟ ಸ್ನೇಹಿತ, ಆಮೇಲೆ ಕಾದಿತ್ತು ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?