ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021
ಅರ್ಚಕರೊಬ್ಬರ ಕಾರನ್ನು ಬೆನ್ನಟ್ಟಿದ ಅಪರಿಚಿತರು, ಅವರ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೆ ಯತ್ನಿಸಿದ್ದಾರೆ. ಅಲ್ಲದೆ ಅರ್ಚಕರ ಮೊಬೈಲ್ ಫೋನನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಹೊಳೆಹೊನ್ನೂರು ನಿವಾಸಿ ಗುರುಮೂರ್ತಯ್ಯ ಅವರ ಕಾರನ್ನು ಬಹುದೂರ ಹಿಂಬಾಲಿಸಿದ ಇಬ್ಬರು ಅಪರಿಚತರು, ಅವರ ಹತ್ಯೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಏನಿದು ಘಟನೆ?
ದಸರಾ ಹಿನ್ನೆಲೆ ಹಳೆ ಮಂಡ್ಲಿಯ ವೀರಭದ್ರೇಶ್ವರ ದೇಸ್ಥಾನದಲ್ಲಿ ಪೂಜೆ ಆಯೋಜಿಸಲಾಗಿತ್ತು. ಇದಕ್ಕಾಗಿ ಸಿದ್ಧತೆಗಳನ್ನು ಪೂರ್ಣಗೊಳಿಸಿ ಗುರುಮೂರ್ತಯ್ಯ ಅವರು ಮನೆಗೆ ತೆರಳುತ್ತಿದ್ದರು. ಆಗ ಎನ್.ಟಿ.ರಸ್ತೆಯ ಅಮೃತ್ ರೈಸ್ ಮಿಲ್ ಬಳಿ ಇಬ್ಬರು ಅಪರಿಚಿತರು ಗುರುಮೂರ್ತಯ್ಯ ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಬಾರ್’ನಲ್ಲಿ ನಮ್ಮ ಮೇಲೆ ಹಲ್ಲೆ ಮಾಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಆತಂಕಗೊಂಡ ಗುರುಮೂರ್ತಯ್ಯ ಅವರು ಕಾರನ್ನು ಕಲ್ಲೂರು ಮಂಡ್ಲಿ ಕಡೆಗೆ ಕಾರು ತಿರುಗಿಸಿದ್ದಾರೆ. ಇಬ್ಬರು ಅಪರಿಚಿತರು ಗುರುಮೂರ್ತಯ್ಯ ಅವರ ಕಾರನ್ನು ಹಿಂಬಾಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಚಾಕು ತೋರಿಸಿ ಬೆದರಿಕೆ
ಸಮೀಪದ ಅಂಗಡಿಯೊಂದರ ಬಳಿ ಜನರು ಇದ್ದುದರಿಂದ ಗುರುಮೂರ್ತಯ್ಯ ಅವರು ಕಾರು ನಿಲ್ಲಿಸಿ ನೆರವಿಗೆ ಮನವಿ ಮಾಡಿದ್ದಾರೆ. ಅಷ್ಟು ಹೊತ್ತಿಗೆ ಹತ್ತಿರ ಬಂದ ಅಪರಿಚಿತರು ಚಾಕು ತೋರಿಸಿ ಬೆದರಿಕೆ ಒಡ್ಡಿದ್ದಾರೆ. ಕಾಲ್ಲು ಎತ್ತಿ ಹಾಕಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವೇಳೆ ಅಪರಿಚಿತರು ಗುರುಮೂರ್ತಯ್ಯ ಅವರ ಮೊಬೈಲ್ ಕಸಿದುಕೊಂಡಿದ್ದಾರೆ. ಕೂಡಲೆ ಕಾರು ಚಲಾಯಿಸಿಕೊಂಡು ಗುರುಮೂರ್ತಯ್ಯ ಅವರು ಸ್ಥಳದಿಂದ ಪರಾರಿಯಾಗಿದ್ದು, ಸಮೀಪದಲ್ಲೇ ಇದ್ದ ಅವರ ಮಾವನ ಮನೆಗೆ ಬಂದು ತಲುಪಿದ್ದಾರೆ.

ಹಿಂಬಾಲಿಸಿ ಬಂದ ಅಪರಿಚಿತರು ಗುರುಮೂರ್ತಯ್ಯ ಅವರ ಮಾವನ ಮನೆ ಬಾಗಿಲು ತೆಗೆಸಲು ಯತ್ನಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಸ್ಥಳದಿಂದ ತೆರಳಿದ್ದಾರೆ. ಬಹು ಹೊತ್ತಿನ ಬಳಿಕ ಬಾಗಿಲು ತೆಗೆದು ನೋಡಿದಾಗ ಸಮೀಪದಲ್ಲೇ ಬೈಕ್ ನಿಂತಿತ್ತು. ಆದರೆ ಅಪರಿಚಿತರು ತೆರಳಿದ್ದರು.
ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

About The Editor
ನಿತಿನ್ ಆರ್.ಕೈದೊಟ್ಲು















