ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅರ್ಚಕರೊಬ್ಬರ ಕಾರನ್ನು ಬೆನ್ನಟ್ಟಿದ ಅಪರಿಚಿತರು, ಅವರ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೆ ಯತ್ನಿಸಿದ್ದಾರೆ. ಅಲ್ಲದೆ ಅರ್ಚಕರ ಮೊಬೈಲ್ ಫೋನನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಹೊಳೆಹೊನ್ನೂರು ನಿವಾಸಿ ಗುರುಮೂರ್ತಯ್ಯ ಅವರ ಕಾರನ್ನು ಬಹುದೂರ ಹಿಂಬಾಲಿಸಿದ ಇಬ್ಬರು ಅಪರಿಚತರು, ಅವರ ಹತ್ಯೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಏನಿದು ಘಟನೆ?
ದಸರಾ ಹಿನ್ನೆಲೆ ಹಳೆ ಮಂಡ್ಲಿಯ ವೀರಭದ್ರೇಶ್ವರ ದೇಸ್ಥಾನದಲ್ಲಿ ಪೂಜೆ ಆಯೋಜಿಸಲಾಗಿತ್ತು. ಇದಕ್ಕಾಗಿ ಸಿದ್ಧತೆಗಳನ್ನು ಪೂರ್ಣಗೊಳಿಸಿ ಗುರುಮೂರ್ತಯ್ಯ ಅವರು ಮನೆಗೆ ತೆರಳುತ್ತಿದ್ದರು. ಆಗ ಎನ್.ಟಿ.ರಸ್ತೆಯ ಅಮೃತ್ ರೈಸ್ ಮಿಲ್ ಬಳಿ ಇಬ್ಬರು ಅಪರಿಚಿತರು ಗುರುಮೂರ್ತಯ್ಯ ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಬಾರ್’ನಲ್ಲಿ ನಮ್ಮ ಮೇಲೆ ಹಲ್ಲೆ ಮಾಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಆತಂಕಗೊಂಡ ಗುರುಮೂರ್ತಯ್ಯ ಅವರು ಕಾರನ್ನು ಕಲ್ಲೂರು ಮಂಡ್ಲಿ ಕಡೆಗೆ ಕಾರು ತಿರುಗಿಸಿದ್ದಾರೆ. ಇಬ್ಬರು ಅಪರಿಚಿತರು ಗುರುಮೂರ್ತಯ್ಯ ಅವರ ಕಾರನ್ನು ಹಿಂಬಾಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಚಾಕು ತೋರಿಸಿ ಬೆದರಿಕೆ
ಸಮೀಪದ ಅಂಗಡಿಯೊಂದರ ಬಳಿ ಜನರು ಇದ್ದುದರಿಂದ ಗುರುಮೂರ್ತಯ್ಯ ಅವರು ಕಾರು ನಿಲ್ಲಿಸಿ ನೆರವಿಗೆ ಮನವಿ ಮಾಡಿದ್ದಾರೆ. ಅಷ್ಟು ಹೊತ್ತಿಗೆ ಹತ್ತಿರ ಬಂದ ಅಪರಿಚಿತರು ಚಾಕು ತೋರಿಸಿ ಬೆದರಿಕೆ ಒಡ್ಡಿದ್ದಾರೆ. ಕಾಲ್ಲು ಎತ್ತಿ ಹಾಕಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವೇಳೆ ಅಪರಿಚಿತರು ಗುರುಮೂರ್ತಯ್ಯ ಅವರ ಮೊಬೈಲ್ ಕಸಿದುಕೊಂಡಿದ್ದಾರೆ. ಕೂಡಲೆ ಕಾರು ಚಲಾಯಿಸಿಕೊಂಡು ಗುರುಮೂರ್ತಯ್ಯ ಅವರು ಸ್ಥಳದಿಂದ ಪರಾರಿಯಾಗಿದ್ದು, ಸಮೀಪದಲ್ಲೇ ಇದ್ದ ಅವರ ಮಾವನ ಮನೆಗೆ ಬಂದು ತಲುಪಿದ್ದಾರೆ.

ಹಿಂಬಾಲಿಸಿ ಬಂದ ಅಪರಿಚಿತರು ಗುರುಮೂರ್ತಯ್ಯ ಅವರ ಮಾವನ ಮನೆ ಬಾಗಿಲು ತೆಗೆಸಲು ಯತ್ನಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಸ್ಥಳದಿಂದ ತೆರಳಿದ್ದಾರೆ. ಬಹು ಹೊತ್ತಿನ ಬಳಿಕ ಬಾಗಿಲು ತೆಗೆದು ನೋಡಿದಾಗ ಸಮೀಪದಲ್ಲೇ ಬೈಕ್ ನಿಂತಿತ್ತು. ಆದರೆ ಅಪರಿಚಿತರು ತೆರಳಿದ್ದರು.
ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






