SHIVAMOGGA LIVE NEWS | 7 FEBRUARY 2024
SHIKARIPURA : ಅಡ್ಡಾದಿಡ್ಡಿ ಬೈಕ್ ಚಲಾಯಿಸುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಖಾಸಗಿ ಕಾಲೇಜು ಕಂಪ್ಯೂಟರ್ ಆಪರೇಟರ್ಗೆ ಚಾಕು ಇರಿಯಲಾಗಿದೆ. ಶಿಕಾರಿಪುರದ ದೊಡ್ಡಪೇಟೆ ಮುಖ್ಯರಸ್ತೆಯ ವಿಠ್ಠಲ ದೇಗುಲದ ಬಳಿ ಮಂಗಳವಾರ ಘಟನೆ ಸಂಭವಿಸಿದೆ.
ಸುಶೀಲ್ (23) ಎಂಬುವವರಿಗೆ ಚಾಕು ಇರಿಯಲಾಗಿದೆ. ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಸಂಭವಿಸಿದ್ದು ಹೇಗೆ?
ಇನ್ನು, ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ‘ದ್ವಿಚಕ್ರ ವಾಹನವನ್ನು ಅಡ್ಡಾದಿಡ್ಡ ಚಲಾಯಿಸುತ್ತಿದ್ದ ಯುವಕನಿಗೆ ಸರಿಯಾಗಿ ಗಾಡಿ ಓಡಿಸುವಂತೆ ಸುಶೀಲ್ ತಿಳಿಸಿದ್ದಾರೆ. ಕುಪಿತಗೊಂಡ ಯುವಕ ನಾಲ್ವರು ಸ್ನೇಹಿತರನ್ನು ಕರೆಯಿಸಿಕೊಂಡಿದ್ದ. ಈ ವೇಳೆ ಸುಶೀಲ್ ಅವರಿಗೆ ಚಾಕು ಇರಿಯಲಾಗಿದೆ. ಘಟನೆ ಸಂಬಂಧ ತನಿಕೆಗೆ ಮೂರು ತಂಡ ರಚಿಸಲಾಗಿದೆ. ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.ʼ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಫಳಫಳ ಹೊಳೆಯಿತು ಹಿತ್ತಾಳೆ ಲೋಟ, ನಂಬಿ ಚಿನ್ನದ ತಾಳಿ ಕೊಟ್ಟ ಮಹಿಳೆಗೆ ಕಾದಿತ್ತು ದೊಡ್ಡ ಆಘಾತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200